ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆ ಮಾಡದಂತೆ ನಿಷೇಧಾಜ್ಞೆ ಜಾರಿಯಾಗಿದೆ.ಸೆಪ್ಟೆಂಬರ್ 13ರಿಂದ 23ರವರೆಗೆ ಗಣೇಶ ಮೂರ್ತಿ ವಿಸರ್ಜಿಸದಂತೆ ನಿಷೇಧಾಜ್ಞೆ ಜಾರಿಯಾಗಿದೆ. ಗೌರಿ ಗಣೇಶನ ಹಬ್ಬದ ಅಂಗವಾಗಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ ಏರಿ ಶ್ರೀರಂಗಪಟ್ಟಣ ತಹಶಿಲ್ದಾರ್ ಡಿ. ನಾಗೇಶ್ ಆದೇಶಿಸಿದ್ದಾರೆ.ಗಣೇಶ ವಿಸರ್ಜನೆ ವೇಳೆ ಕಾವೇರಿ ನದಿಗಿಳಿಯುವಾಗ ಅನಾಹುತ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಸಂಭವಿಸಿರುವ ಅವಘಡಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗಣೇಶ ವಿಸರ್ಜನೆಗೆ ನಿಷೇಧಿಸಲಾಗಿದೆ. ಸದ್ಯ ಎಂದಿನಂತೆ ಪ್ರವಾಸಿಗರ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


