ಚಿಕ್ಕಬಳ್ಳಾಪುರ: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ನೀಡಿರುವ ಭಾರತ್ ಬಂದ್‍ಗೆ ಚಿಕ್ಕಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ.ಬೆಳ್ಳಂ ಬೆಳಗ್ಗೆ ಬೀದಿಗೆ ಇಳಿದಿರೋ ಕರವೇ ಯುವಸೇನೆಯಯ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸುವ ಮೂಲಕ ಭಾರತ್ ಬಂದ್‍ಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ನಗರದ ಬಲಮುರಿ ವೃತ್ತದಿಂದ ಬಿಬಿ ರಸ್ತೆ ಮೂಲಕ ಅಂಬೇಡ್ಕರ್ ವೃತ್ತದವರೆಗೂ ಪ್ರತಿಭಟನಾ ಪಂಜಿನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.ಪೆಟ್ರೋಲ್ ಹಾಗೂ ಡೀಸಲ್ ಸೇರಿದಂತೆ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದ್ದು, ಪೆಟ್ರೋಲ್ ಡೀಸಲ್ ಬೆಲೆ ಇಳಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


