ದಾವಣಗೆರೆ: ಪತ್ನಿಯ ಮೇಲೆ ಪತಿ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಓಂಕಾರೇಶ್ವರಿ ಬಡಾವಣೆಯಲ್ಲಿ ನಡೆದಿದೆ.ದೇವಮ್ಮ(35) ಪತಿ ತಿಪ್ಪೇಸ್ವಾಮಿಯಿಂದಲೇ ಚಾಕುವಿನಿಂದ ಹಲ್ಲೆಗೊಳಗಾದ ಮಹಿಳೆ. 10 ವರ್ಷದ ಹಿಂದೆ ಇಬ್ಬರಿಗೂ ಮದುವೆಯಾಗಿದ್ದು, ಮೂರು ಜನ ಮಕ್ಕಳಿದ್ದಾರೆ.ಹಲ್ಲೆಗೊಳಗಾದ ಮಹಿಳೆ ಸಂಬಂಧಿಕರ ಮನೆಗೆ ಹೋಗಿ ಬಂದ ಬಳಿಕ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದದೆ. ಪತ್ನಿಯ ಮಾತುಗಳಿಂದ ಸಿಟ್ಟುಗೊಂಡ ಪತಿ, ದೇವಮ್ಮ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ದೇವಮ್ಮ ಅವರನ್ನು ಕೂಡಲೇ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


