ದಾವಣಗೆರೆ: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ 60 ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ನಡೆದಿದೆ.ಬಿಳಿಚೋಡ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ತ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನಕ್ಕೆ ಬಂದಿದ್ದ ಮಕ್ಕಳು, ಭಕ್ತರು ಸೇರಿದಂತೆ ಸ್ಥಳೀಯರು ಪ್ರಸಾದ ಸೇವಿಸಿದ್ದು, ಸ್ವಲ್ಪ ಸಮಯ ಕಳೆಯುತ್ತಿದ್ದಂತೆ ಊಟ ಮಾಡಿದ್ದವರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.ತಕ್ಷಣವೇ ಅಸ್ವಸ್ಥಗೊಂಡವರನ್ನು ಬಿಳಿಚೋಡ ಸರ್ಕಾರಿ ಆಸ್ಪತ್ರೆಗೆ ಹಾಗೂ ಹತ್ತಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


