ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಗಣಪನ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ರೆ ಅನಿಷ್ಟ ಎಂದು ಅರ್ಚಕರ ಒಕ್ಕೂಟದ ಮುಖ್ಯಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್ ದೀಕ್ಷಿತ್ ಹೇಳಿದ್ದಾರೆ.ಪಿಒಪಿ ಗಣಪತಿ ಧರ್ಮಶಾಸ್ತ್ರಕ್ಕೆ ಅನಿಷ್ಟವಾಗಿದ್ದು, ಪೂಜೆಗೆ ನಿಷಿದ್ಧವಾಗಿದೆ. ಪಿಒಪಿ ಗಣಪತಿ ನೀರಿನಲ್ಲಿ ಕರಗಲ್ಲ, ಅದನ್ನ ಮಚ್ಚುಗಳಿಂದ ಒಡೆಯಲಾಗುತ್ತದೆ. ಹೀಗಾಗಿ ಪ್ರಕೃತಿಗೂ ಮಾರಕವಾಗಿದೆ ಎಂದು ಕೆ.ಎಸ್.ಎನ್ ದೀಕ್ಷಿತ್ ಹೇಳಿದರು.ಭಕ್ತಿಯ ಜೊತೆಗೆ ಜ್ಞಾನವೂ ಇರಬೇಕು, ಇಲ್ಲದಿದ್ದರೆ ಗಣಪ ಒಲಿಯಲ್ಲ. ಭಾರತೀಯ ಪೂಜಾ ಪದ್ಧತಿಯು ಆಧ್ಯಾತ್ಮ ವಿಜ್ಞಾನದ ತಳಹದಿಯಿಂದ ಕೂಡಿದೆ. ಪೃಥ್ವಿ ತತ್ವದ ಗಣಪತಿಯನ್ನು ಜೇಡಿ ಮಣ್ಣಿನಿಂದಲೇ ಮಾಡಬೇಕು. ದೇವತೆಗಳ ವಿಗ್ರಹಗಳನ್ನು, ಚಿತ್ರಗಳನ್ನು ತುಳಿದರೆ, ಕತ್ತರಿಸಿದರೆ ಮಹಾದೋಷ ಪ್ರಾಪ್ತಿಯಾಗುತ್ತದೆ ಎಂದು ಕೆ.ಎಸ್ ಉಮೇಶ್ ಶರ್ಮಾ ತಿಳಿಸಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


