ಹಾಸನ: ಅಭಿವೃದ್ಧಿ ಕೆಲಸವನ್ನು ಮೆಚ್ಚಿ ಜನತೆ ಜಿಲ್ಲೆಯಲ್ಲಿ ಜೆಡಿಎಸ್ ಕೈ ಹಿಡಿದಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಾಸನದಲ್ಲಿ ಜೆಡಿಎಸ್ ಅಧಿಕಾರಕ್ಕೆ ಏರಲಿದೆ. ಪಕ್ಷೇತರರು ಅಭ್ಯರ್ಥಿಗಳು ಜೆಡಿಎಸ್ ಪಕ್ಷದವರೇ. ಆದ್ದರಿಂದ ನಗರಸಭೆ ಅಧಿಕಾರ ಹಿಡಿಯುವುದು ಖಚಿತವಾಗಿದೆ. ಬಿಜೆಪಿಯನ್ನು ಹಾಸನ ನಗರದ ತಿರಸ್ಕರಿಸಿದ್ದಾರೆ. ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ ಎಂದು ಹೇಳಿದರು.ಜಿಲ್ಲೆಯಲ್ಲಿರುವ 5 ತಾಲೂಕುಗಳಾದ ಸಕಲೇಶಪುರ, ಚನ್ನರಾಯಪಟ್ಟಣ, ಅರಸಿಕೆರೆ, ಹೊಳೆನರಸೀಪುರದ ಜನತೆ ಜೆಡಿಎಸ್‍ಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ ಹೀಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.ಕಾಗದಗಳಲ್ಲಿ ನಾನು ಕೆಲಸ ಮಾಡುತ್ತೇನೆ ಎಂಬ ಮಾತಿಗೆ ಮುಂದಿನ ದಿನಗಳಲ್ಲಿ ಪ್ರತಿಕ್ರಿಯೆ ಕೊಡುತ್ತೇನೆ. ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಎಲ್ಲಾ ವರ್ಗದ ಜನರು ಮತ ನೀಡಿದ್ದಾರೆ. ಇನ್ನು ಮುಂದೆ ಜನರಿಗಾಗಿ ಕೆಲಸ ಮಾಡಬೇಕು ಅಷ್ಟೇ ರಾಜಕೀಯವನ್ನು ಬಿಟ್ಟು ಬಿಡೋಣ. ಜಿಲ್ಲೆಯಲ್ಲಿ ನಮ್ಮ ಪಕ್ಷದ ಪ್ರಾಬಲ್ಯ ಮುಂದುವರಿದಿದೆ ಎಂದು ಸಂತಸ ವ್ಯಕ್ತಪಡಿಸಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


