ಬಾಗಲಕೋಟೆ: ಸಮ್ಮಿಶ್ರ ಸರ್ಕಾರ ನೂರು ದಿನಗಳಲ್ಲಿ ವರ್ಗಾವಣೆ ದಂಧೆಯನ್ನು ಬಿಟ್ಟು ಬೇರೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಮುಧೋಳ ಪಟ್ಟಣದಲ್ಲಿ ಶಾಸಕ ಮುರುಗೇಶ್ ನಿರಾಣಿಯವರ 53 ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರಿಗೆ ಶುಭಾಶಯ ಕೋರಿ ಮಾತನಾಡಿದ ಅವರು, ನನ್ನ ಪ್ರಕಾರ ಜೆಡಿಎಸ್ ಹಾಗೂ ಕಾಂಗ್ರೆಸ್ಸಿನ ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯೋದಿಲ್ಲ. ಸರ್ಕಾರ ಕೇವಲ ವರ್ಗಾವಣೆಯ ದಂಧೆಯಲ್ಲಿ ತೊಡಗಿಕೊಂಡಿದೆ. ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಪೂರೈಸಿದ್ದರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲವೆಂದು ಕಿಡಿಕಾರಿದರು.  ಕುಮಾರಸ್ವಾಮಿ ಸರ್ಕಾರ ಬದುಕಿದ್ದು ಸತ್ತಾಂತಾಗಿದೆ. ಸರ್ಕಾರದಲ್ಲಿ ವಸೂಲಿ ಬಾಜಿ ದಂಧೆ ನಡೆಯುತ್ತಿದೆ. ಸಾಲಮನ್ನಾ ಬಗ್ಗೆ ಸಿಎಂಗೆ ಸ್ಪಷ್ಟತೆ ಇಲ್ಲ. ಅವರು ದಿನಕ್ಕೊಂದು ಹೇಳಿಕೆ ನೀಡುತ್ತಾ ಪ್ರಚಾರದಲ್ಲಿದ್ದಾರೆ ಹೊರತು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಯತ್ನಿಸುತ್ತಿಲ್ಲ. ಅಧಿಕಾರಕ್ಕೆ ಬಂದು ನೂರು ದಿನವಾದರೂ, ಒಂದು ದಿನ ಸಹ ಉತ್ತರ ಕರ್ನಾಟಕದ ಭಾಗದಲ್ಲಿ ಪ್ರವಾಸ ಮಾಡಿದ್ದಾರಾ ಎಂದು ಪ್ರಶ್ನಿಸಿದರು.ಯಡಿಯೂರಪ್ಪ ಸಿಎಂ ಆಗುತ್ತಾರೆ ಅಂತ ಕನಸು ಕಾಣುತ್ತಿದ್ದಾರೆ ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಿದ್ದರಾಮಯ್ಯನವರು ಹಗಲುಗನಸು ಕಾಣುತ್ತಿದ್ದಾರೋ, ಇಲ್ಲ ಯಡಿಯೂರಪ್ಪ ಹಗಲುಗನಸು ಕಾಣುತ್ತಿದ್ದಾರೋ ಎಂಬುದು ಸದ್ಯದಲ್ಲೇ ಗೊತ್ತಾಗಲಿದೆ. ಅಲ್ಲದೇ ನಮ್ಮ ಪಕ್ಷದ ಯಾವುದೇ ಮುಖಂಡರು ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಹೇಳಿಕೆಗಳನ್ನು ಹೇಳಬೇಡಿ ಎಂದು ವಿನಂತಿಸಿಕೊಂಡರು.ಸಿಎಂ ಕುಮಾರಸ್ವಾಮಿಯವರು ದೇವಸ್ಥಾನಗಳಿಗೆ ತೆರಳುತ್ತಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಸಂಕಷ್ಟದಲ್ಲಿರುವ ರೈತರ ಹಾಗೂ ಸಂತ್ರಸ್ತರ ನೋವುಗಳನ್ನು ಕೇಳಬೇಕು. ಇವರ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಪರಸ್ಪರ ಕಚ್ಚಾಟ ಶುರವಾಗಿದೆ. ಹೀಗಾಗಿ ಸಿದ್ದರಾಮಯ್ಯನವರು ಕಾಂಗ್ರೆಸ್ಸಿನ ಕೆಲವು ಶಾಸಕರಿಂದ ತಾವೇ ಮುಂದಿನ ಸಿಎಂ ಎಂಬ ಹೇಳಿಕೆಗಳನ್ನು ಹೇಳಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ನೀರಿನ ಮೇಲೆ ಗುಳ್ಳೆ ಇದ್ದಂತೆ: ಜಗದೀಶ್ ಶೆಟ್ಟರ್ಸರ್ಕಾರದಲ್ಲಿ ಕಚ್ಚಾಟ ಇಲ್ಲದಿದ್ದರೆ, ಪುನಃ ಸಂಪುಟ ವಿಸ್ತರಣೆ ಯಾಕೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಈ ಸರ್ಕಾರ ಬಹಳ ದಿನ ಉಳಿಯಲ್ಲ ಅಂತ ನಾನು ಹೇಳುತ್ತಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಶಾಸಕರೇ ಹೇಳುತ್ತಿದ್ದಾರೆ. ಅಲ್ಲದೇ ಇವರ ಸರ್ಕಾರವು ಪ್ರಮುಖ ನಾಯಕರ ಫೋನ್ ಕದ್ದಾಲಿಕೆ ನಡೆಸುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಈ ವಿಚಾರದ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳದಿಂದ ಸಿದ್ದರಾಮಯ್ಯ ಸ್ಪರ್ಧೆವಿಚಾರ ಪ್ರಸ್ತಾಪಿಸಿದಾಗ, ಅವರು ಎಲ್ಲಿಂದಲಾದರೂ ಸ್ಪರ್ಧಿಸಲಿ, ನಮಗೇನು ವ್ಯತ್ಯಾಸವಾಗಲ್ಲ. ಎಲ್ಲಾ ಕಡೆ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಇನ್ನೂ ಹೆಚ್ಚಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ. ಅಲ್ಲದೇ ಈಗ ನಡೆದಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರಾಜ್ಯದ ಶೇ 50 ಕ್ಕೂ ಹೆಚ್ಚು ಕಡೆ ನಮ್ಮ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


