ಮಂಗಳೂರು: ಜೈಲಿನಲ್ಲಿರುವ ಕೈದಿಗಳನ್ನು ಭೇಟಿಯಾಗಲು ಕುಟುಂಬಸ್ಥರು ದಿನವಿಡೀ ಕಷ್ಟ ಪಡುತ್ತಾರೆ. ಆದರೆ ಇಲ್ಲೊಬ್ಬ ನಟೋರಿಯಸ್ ಕೈದಿಯನ್ನು ಪೊಲೀಸರೇ ರಸ್ತೆ ಮಧ್ಯೆ ಕುಟುಂಬಸ್ಥರಿಗೆ ಭೇಟಿ ಮಾಡಿಸಿ ಕಾನೂನು ಉಲ್ಲಂಘಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಫರಂಗಿಪೇಟೆಯ ಡಬಲ್ ಮರ್ಡರ್ ಪ್ರಕರಣದ ಪ್ರಮುಖ ಆರೋಪಿ ಡೀಲ್ ನೌಫಾಲ್ ನನ್ನು ಪ್ರಕರಣಯೊಂದಕ್ಕೆ ಸಂಬಂಧಿಸಿ ತುಮಕೂರು ಪೊಲೀಸರು ಮಂಗಳೂರು ಜೈಲಿನಿಂದ ಕರೆದೊಯ್ದಿದ್ದರು. ತುಮಕೂರಿನ ಚಿಕ್ಕನಾಯಕನಹಳ್ಳಿ ಕೋರ್ಟಿ ಗೆ ಹಾಜರುಪಡಿಸಿ ಮಂಗಳೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಪೊಲೀಸರೇ ವಾಹನ ನಿಲ್ಲಿಸಿ ಕುಟುಂಬಸ್ಥರ ಭೇಟಿಗೆ ಅವಕಾಶ ಮಾಡಿದ್ದಾರೆ.ನೌಫಾಲ್ ಪತ್ನಿ, ಮಗು ಸೇರಿ ಕುಟುಂಬಸ್ಥರು ಪೊಲೀಸ್ ವಾಹನದಲ್ಲಿಯೇ ಭಾವುಕ ಭೇಟಿ ಮಾಡಿದ್ದಾರೆ. ಪೊಲೀಸರು ಜೊತೆಗಿದ್ದರೂ ವಿಚಾರಣಾಧೀನ ಕೈದಿಯನ್ನು ರಸ್ತೆ ಮಧ್ಯೆ ನಿಲ್ಲಿಸಿ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿದ್ದು ಹೇಗೆ ಎನ್ನುವ ಪ್ರಶ್ನೆ ಎದುರಾಗಿದೆ. ಅಷ್ಟೇ ಅಲ್ಲದೇ ಪೊಲೀಸರು ಕೈದಿಯನ್ನು ಭೇಟಿ ಮಾಡಿಸಿದ್ದ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ.ಈ ಸಂದರ್ಭದಲ್ಲಿ ಕೈದಿ ತಪ್ಪಿಸಿಕೊಳ್ಳುವ ಅಥವಾ ಅಪಹರಣಕ್ಕೆ ಒಳಗಾಗುವ ಸಾಧ್ಯತೆಗಳೂ ಇರುತ್ತವೆ. ಆದರೆ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಪೊಲೀಸರು ಕೈದಿಯ ಜೊತೆ ಡೀಲ್ ಮಾಡಿಕೊಂಡು ಕುಟುಂಬಸ್ಥರನ್ನು ಭೇಟಿ ಮಾಡಿಸಿದ್ದು, ಕರ್ತವ್ಯ ಲೋಪಕ್ಕೆ ನಿದರ್ಶನ ಎಂಬ ಮಾತುಗಳು ಕೇಳಿ ಬಂದಿವೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


