ಕಲಬುರಗಿ: ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ, ಕರ್ನಾಟಕದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರನಾಗಿರುವ ಮಲ್ಲಿಕಾರ್ಜುನ ಖರ್ಗೆಯವರನ್ನು ಹೇಗಾದರೂ ಸೋಲಸಲೇಬೇಕೆಂದು ಬಿಜೆಪಿ ಮಾಸ್ಟರ್ ಮೈಂಡ್ ಪ್ಲಾನ್ ಸಿದ್ದಪಡಿಸಿದೆ. ಹೀಗಾಗಿ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾರವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಎಲ್ಲಾ ರೀತಿಯ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿದು ಬಂದಿದೆ.ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನಪ್ರಭಾರವರನ್ನು ಅಭ್ಯರ್ಥಿಯನ್ನಾಗಿಮಾಡಿದರೇ, ಎಡ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತ ಮತದಾರರನ್ನು ಸೆಳೆಯಬಹುದು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ. ಅಲ್ಲದೇ ರತ್ನಪ್ರಭಾರವರು ಸಹ ಈಗಾಗಲೇ ಹಲವು ಬಾರಿ ಕಲಬುರಗಿ ಭೇಟಿ ನೀಡಿದ್ದಾರೆ. ಅಲ್ಲದೇ ಮತ್ತೆ ಸೆಪ್ಟಂಬರ್ ನಲ್ಲಿ ಭೇಟಿ ನೀಡುತ್ತಿದ್ದಾರೆ.ರತ್ನಪ್ರಭಾರ ಪದೇ ಪದೇ ಭೇಟಿಯಿಂದಾಗಿ, ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸುತ್ತಾರೆನ್ನು ಚರ್ಚೆ ಇದೀಗ ಬಿಜೆಪಿ ವಲಯದಲ್ಲಿ ಕೇಳಿ ಬಂದಿದ್ದು, ಈ ಮೂಲಕ ಮೂಲಕ ಖರ್ಗೆ ಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಸಜ್ಜಾಗಿದೆ ಎನ್ನಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


