ರಾಯಚೂರು: ನನಗೆ ಲೋಕಸಭಾ ಚುನಾವಣೆಗೆ ನಿಲ್ಲುವ ಭ್ರಮೆಯಿಲ್ಲ. ಆದ್ರೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡ ಇದೆ ಅಂತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಿಳಿಸಿದ್ದಾರೆ.ಇಂದು ಮಂತ್ರಾಲಯಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಕೊಡುವಂತೆ ರಾಯರಲ್ಲಿ ಬೇಡಿಕೊಳ್ಳುತ್ತೇನೆ. ರಾಜಕೀಯವಾಗಿ ಎಲ್ಲವನ್ನೂ ಅನುಭವಿಸಿದ್ದೇನೆ. ಮುಂದೆ ಲೊಕಸಭಾ ಚುನಾವಣೆಗೆ ಕೂಡ ಇದೇ ಶಕ್ತಿ ಬೇಕು ಅಂತ ಹೇಳಿದ್ರು.ನನಗೆ ಚುನಾವಣೆಗೆ ನಿಲ್ಲುವ ಭ್ರಮೆಯಿಲ್ಲ. ಆದ್ರೆ ನಿಲ್ಲುವಂತೆ ನಮ್ಮ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಚುನಾವಣೆಗೆ ಇನ್ನೂ 10 ತಿಂಗಳು ಬಾಕಿಯಿದೆ. ಗುರುಗಳ ಪ್ರೇರಣೆ, ದೇಹದ ಪ್ರಕೃತಿ ಆಧಾರದ ಮೇಲೆ ನಡೆಯುತ್ತೇನೆ. ಗುರುಗಳ ಆಶಿರ್ವಾದ ಪಡೆಯಲು ಬಂದಿದ್ದೇನೆ. ಹೀಗಾಗಿ ಇಲ್ಲಿ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಆದ್ರೆ ಇದುವರೆಗೂ ಆರ್ಥಿಕ ಭರವಸೆ ಸಿಕ್ಕಿಲ್ಲ ಅಂತ ಅವರು ವಿಷಾದ ವ್ಯಕ್ತಪಡಿಸಿದ್ರು.ಇಂದು ಮಂತ್ರಾಲಯದಲ್ಲೆ ತಂಗಿದ್ದು ರಾಯರ ದರ್ಶನ ಪಡೆಯಲಿರುವ ದೇವೆಗೌಡರು ನಾಳೆ ಮಂತ್ರಾಲಯದಿಂದ ತೆರಳಲಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv






 Advertisement 




Sign in to your account
Username or Email Address


Password

 Remember Me


