ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ಬಳಿ ಸತತ ಮೂರನೇ ಬಾರಿ ರೈಲ್ವೇ ಮೇಲ್ಸೇತುವೆ ಕುಸಿದಿದೆ.ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಪ್ರತಿನಿಧಿಸುವ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಿದ್ದು, ಉದ್ಘಾಟನೆಗೂ ಮುನ್ನ ಈ ರೇಲ್ವೇ ಮೇಲ್ಸೇತುವೆ ಪದೇ ಪದೇ ಕುಸಿಯುತ್ತಿದೆ. ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಸೇತುವೆ ಆಗಾಗ್ಗೆ ಕುಸಿಯುತ್ತಿದೆ ಅಂತ ಸ್ಥಳೀಯರು ಹಾಗೂ ಪ್ರಯಾಣಿಕರು ಆರೋಪಿಸುತ್ತಿದ್ದಾರೆ.ನೂತನ ಫ್ಲೈಓವರ್ ಇದಾಗಿದ್ದು, ಕೆಲ ತಿಂಗಳ ಹಿಂದೆ ರೈಲ್ವೇ ಮೇಲ್ಸೇತುವೆ ತಡೆಗೋಡೆ ಒಂದು ಬಾರಿ ಮೊದಲೇ ಕುಸಿದು ಬಿದ್ದಿತ್ತು. ನಂತರ ಅದರ ಪಕ್ಕದ ಎಡಭಾಗದಲ್ಲಿ ಕಳೆದ ಜುಲೈ ತಿಂಗಳಿನಲ್ಲಿ 2ನೇ ಬಾರಿಗೆ ಕುಸಿದಿತ್ತು. ಇದರಿಂದಾಗಿ ಸ್ಥಳೀಯರು ಮತ್ತು ಪ್ರಯಾಣಿಕರು ಹೆಚ್ಚಿನ ಆತಂಕಪಟ್ಟಿದ್ದರು.ಸೇತುವೆಯ ಗೋಡೆಗಳು ಕುಸಿತವಾಗಿದ್ದು, ಸಾರ್ವಜನಿಕರಿಗೆ ಕಾಣಬಾರದೆಂದು ಟಾರ್ಪಲ್ ಅಳವಡಿಕೆ ಮಾಡಲಾಗಿತ್ತು. ಉದ್ಘಾಟನೆಗೂ ಮುನ್ನವೇ ಮೇಲ್ಸೇತುವೆ ಕುಸಿತಕೊಂಡಿದ್ದು ಕಳಪೆ ಕಾಮಾಗಾರಿಗೆ ಉದಾಹರಣೆಯಾಗಿದೆ. ಇನ್ನು ಗೋಡೆ ಕುಸಿತದ ವೇಳೆಯಲ್ಲಿ ಯಾವುದೇ ವಾಹನಗಳು ಚಲಿಸುತ್ತಿರಲಿಲ್ಲ. ಹಾಗಾಗಿ ಅನಾಹುತವೊಂದು ತಪ್ಪಿತ್ತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvhttps://www.youtube.com/watch?v=hcPdS2X3dPISign in to your account
Username or Email Address


Password

 Remember Me


