ಬೆಂಗಳೂರು: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಚಿತ್ರಿಕರಣದ ವೇಳೆ ಕುದುರೆ ಮೇಲಿನಿಂದ ಬಿದ್ದು, ಪ್ರಾಣಾಪಾಯದಿಂದ ಪಾರಾಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಶ್ರೀಮನ್ನಾರಾಯಣ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. 10 ದಿನಗಳಿಂದ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಈ ವೇಳೆ ರಕ್ಷಿತ್ ಶೆಟ್ಟಿ ಕುದುರೆ ಮೇಲೆ ಕುಳಿತು ಸವಾರಿ ಮಾಡುತ್ತಿರುತ್ತಾರೆ. ಅದೇ ಸಂದರ್ಭದಲ್ಲಿ ಕುದುರೆ ಏಕಾಏಕಿ ಕೆನೆದು ನಿಂತಿದೆ. ಆಗ ಆಯಾ ತಪ್ಪಿ ರಕ್ಷಿತ್ ಶೆಟ್ಟಿ ಹಾಗೂ ಕುದುರೆ ನೆಲದ ಮೇಲೆ ಹಿಮ್ಮುಖವಾಗಿ ಬಿದ್ದಿದ್ದಾರೆ. ಘಟನೆಯಲ್ಲಿ ಯಾವುದೇ ಅಪಾಯಗಳು ಸಂಭವಿಸಿಲ್ಲ.ಈ ಘಟನೆ ವೇಳೆ ಎಲ್ಲರೂ ಅವರವರ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಕುದುರೆ ನೋಡಿಕೊಳ್ಳುವವರು ಬಳಿ ಇದ್ದರೂ ಏಕಾಏಕಿ ಕೆನೆದು ನಿಂತಿದ್ದು ಯಾಕೆ ಎನ್ನುವುದು ತಿಳಿದು ಬಂದಿಲ್ಲ. ಕುದುರೆಯಿಂದ ಬಿದ್ದರೂ ರಕ್ಷಿತ್ ಶೆಟ್ಟಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು ಎಂದು ಚಿತ್ರತಂಡ ತಿಳಿಸಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


