ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ ಹಿನ್ನಡೆಗೆ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವೇ ಕಾರಣವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ, ಮುಖಂಡರುಗಳು ಪ್ರತ್ಯೇಕ ಧರ್ಮದ ಹೋರಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿಸಿದ್ದಾರೆ ಎಂದು ತಿಳಿದು ಬಂದಿದೆ.ಹೌದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಭಯ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಲಿಂಗಾಯತ ಧರ್ಮದ ಹೋರಾಟವನ್ನು ಬ್ರೇಕ್ ಹಾಕಲು ಮುಖಂಡರುಗಳು ಮುಂದಾಗಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆ ಮುಗಿಯುವವರೆಗೂ ಯಾವುದೇ ಸಮಾವೇಶ, ಪ್ರತಿಭಟನೆ ಹಾಗೂ ಸತ್ಯಾಗ್ರಹಗಳನ್ನು ನಡೆಸದಂತೆ ಲಿಂಗಾಯತ ಜಾಗತಿಕ ಮಹಾಸಭಾದ ಪ್ರಧಾನ ಕಾರ್ಯದರ್ಶಿಯಾದ ಶ್ರೀಕಾಂತ್ ಸ್ವಾಮಿಗಳು ನಿರ್ಣಯ ತೆಗೆದುಕೊಂಡಿದ್ದಾರೆಂದು ಹೇಳಲಾಗಿದೆ.ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಾಗಲು ಪ್ರಮುಖ ಕಾರಣವಾಗಿದ್ದು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವೇ ಎಂಬುದು ವ್ಯಾಪಕವಾಗಿ ಕೇಳಿ ಬಂದ ಹಿನ್ನೆಲೆಯಲ್ಲಿ, ಲಿಂಗಾಯತ ಜಾಗತಿಕ ಮಹಾಸಭಾದ ಮುಖಂಡರೊಂದಿಗೆ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.ಲೋಕಸಭೆ ಚುನಾವಣೆ ವೇಳೆ ಎಚ್ಚರಿಕೆ ನಡೆ ಅನುಸರಿಸಲು ಮಹಾಸಭಾ ಮುಂದಾಗಿದ್ದು, ತಾತ್ಕಾಲಿಕವಾಗಿ ಹೋರಾಟಕ್ಕೆ ಬ್ರೇಕ್ ಹಾಕಲು ತೀರ್ಮಾನಿಸಿದ್ದಾರೆ. ಇದರಿಂದಾಗಿ ಲಿಂಗಾಯತ ಧರ್ಮದ ಯಾವುದೇ ಬಹಿರಂಗ ಸಭೆ, ಸಂಸದರ ಮನೆ ಮುತ್ತಿಗೆ ಹಾಗೂ ಸಮಾವೇಶಗಳನ್ನು ನಡೆಸದಂತೆ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆಂದು ತಿಳಿದು ಬಂದಿದೆ.ಜಾಗತಿಕ ಮಹಾಸಭಾದ ನಿರ್ಧಾರಕ್ಕೆ ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿಯವರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದು, ಪ್ರತಿಭಟನೆಯನ್ನು ಕೈ ಬಿಟ್ಟರೆ ಹೋರಾಟಕ್ಕೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚಾಗುತ್ತದೆ. ಹೀಗಾಗಿ ಲಿಂಗಾಯತ ಜಾಗತಿಕ ಮಹಾಸಭಾ ತೀರ್ಮಾನಕ್ಕೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಅಲ್ಲದೇ  ಸಭಾ ತೀರ್ಮಾನದ ನಡುವೆಯೂ ನವೆಂಬರ್ ತಿಂಗಳಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


