ಮಂಡ್ಯ: ಜಿಲ್ಲೆಯ ತಳಗವಾದಿ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ನಿಂದ ರೈತರಿಗೆ ಅಡವಿಟ್ಟ ಒಡವೆಗಳನ್ನು ಹರಾಜು ಹಾಕಲಾಗುವುದು ಎಂದು ನೋಟಿಸ್ ಕಳುಹಿಸಲಾಗಿದೆ.2011 ರಿಂದ 2016 ರವರೆಗೆ ಒಡವೆ ಅಡವಿಟ್ಟ ಗ್ರಾಹಕರು ಅಸಲು, ಬಡ್ಡಿ ಪಾವತಿಸದೆ ಸುಸ್ತಿದಾರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ 28-08-18 ರಂದು ಒಡವೆಗಳನ್ನು ಹರಾಜು ಹಾಕಲಾಗುತ್ತದೆ ಎಂದು ಕೆನರಾ ಬ್ಯಾಂಕ್ ತನ್ನ ನೋಟಿಸ್ ನಲ್ಲಿ ತಿಳಿಸಿದೆ. ಈ ಸಂಬಂಧ ತಳಗವಾದಿ ಗ್ರಾಮದ ಹಲವೆಡೆ ಬ್ಯಾಂಕ್ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ.ಸತತ ಬರಗಾಲದಿಂದ ಬಿತ್ತನೆ ಕಾರ್ಯಕ್ಕಾಗಿ ಒಡವೆಗಳನ್ನು ಅಡವಿಟ್ಟು ಸಾಲ ಪಡೆಯಲಾಗಿತ್ತು. ಈ ವರ್ಷ ಚೆನ್ನಾಗಿ ಮಳೆಯಾಗಿದ್ದು, ಸಾಲ ತೀರಿಸಿ ಒಡವೆ ಬಿಡಿಸಿಕೊಳ್ಳೋಣ ಎಂದು ಯೋಚಿಸಲಾಗಿತ್ತು. ಒಂದು ಬ್ಯಾಂಕ್ ನಮ್ಮ ಒಡವೆಗಳನ್ನು ಹರಾಜು ಹಾಕಿದ್ರೆ ವಿಷ ಕುಡಿಯದೇ ಬೇರೆ ಮಾರ್ಗ ನಮ್ಮ ಮುಂದಿಲ್ಲ ಎಂದು ನೋಟಿಸ್ ಪಡೆದಿರುವ ರೈತರು ಅಳಲು ತೋಡಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


