ವಿಜಯಪುರ: ಮುಸ್ಲಿಂ ವಿರೋಧಿ ಹಾಗೂ ಗೋವು ಸಂರಕ್ಷಣೆ ಕುರಿತು ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಈಗ ಕೇರಳ ಪ್ರವಾಹಕ್ಕೆ ಗೋವು ಹತ್ಯೆ ಮಾಡಿದ್ದೇ ಕಾರಣ ಎಂದು ಹೇಳುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಕೇರಳದಲ್ಲಿ ಇತ್ತೀಚೆಗೆ ನಡು ರಸ್ತೆಯಲ್ಲಿಯೇ ಬಹಿರಂಗವಾಗಿ ಗೋವುವನ್ನು ಕಡಿಯಲಾಗಿತ್ತು. ಈ ಘಟನೆ ನಡೆದು ಒಂದು ವರ್ಷ ಕಳೆದಿಲ್ಲ. ಆಗಲೇ ಪ್ರವಾಹ ಬಂದು ಅವರು ಸಂಕಷ್ಟಕ್ಕೆ ಸಿಲುಕಬೇಕಾಯಿತು ಎಂದು ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಗೋವುವನ್ನು ಹತ್ಯೆ ಮಾಡಿದ ಕೇರಳ ಜನತೆ ಹಿಂದೂ ಧರ್ಮದ ಭಾವನೆಗೆ ಧಕ್ಕೆ ತಂದಿದ್ದರು. ಹೀಗಾಗಿ ಅವರಿಗೆ ತಕ್ಕ ಶಾಸ್ತಿಯಾಯಿತು. ಯಾರು ಹಿಂದೂ ಧರ್ಮವನ್ನು ಅವಮಾನಿಸುತ್ತಾರೆ ಅವರಿಗೆ ತಕ್ಕ ಶಿಕ್ಷೆ ಆಗುತ್ತದೆ ಎನ್ನವುದಕ್ಕೆ ಇದು ನಿದರ್ಶನ ಎಂದು ವ್ಯಂಗ್ಯವಾಡಿದರು.ಬಿಜೆಪಿ ಶಾಸಕನೊಬ್ಬ ವಿಜಯಪುರಲ್ಲಿ ಇದ್ದಾನೆ ಅಂತಾ ಜಿಲ್ಲೆಯಲ್ಲಿ ಗೋವುಗಳ ಹತ್ಯೆ ಕಡಿಮೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಕೇವಲ ಶೇಕಡಾ 10 ರಷ್ಟು ಮಾತ್ರ ಗೋವು ಹತ್ಯೆಯಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಂಪೂರ್ಣವಾಗಿ ಗೋವು ಹತ್ಯೆ ನಿಷೇದ ಕಾಯ್ದೆ ಜಾರಿಗೆ ತರುತ್ತದೆ ಅಂತ ಅವರು ಹೇಳಿದ್ರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


