ದಾವಣಗೆರೆ: ದಾಯಾದಿಗಳ ದ್ವೇಷಕ್ಕೆ ನೂರಾರು ಅಡಿಕೆ ಮರಗಳು ಬಲಿಯಾದ ಅಮಾನವೀಯ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ. ಚಿಕ್ಕರಾಜು ಹಾಗೂ ಆತನ ತಮ್ಮನ ನಡುವೆ ಆಸ್ತಿ ವಿವಾದವಿತ್ತು. ಆಸ್ತಿ ವಿವಾದ ಕೋರ್ಟ್ ಮೆಟ್ಟಲೇರಿತ್ತು.ಕೆಲ ದಿನಗಳ ಹಿಂದೆ ಚನ್ನಗಿರಿ ಕೋರ್ಟ್ ನಲ್ಲಿ ಚಿಕ್ಕರಾಜು ಸಹೋದರನಿಗೆ ಜಮೀನು ಉಳುಮೆ ಮಾಡುವಂತೆ ಆದೇಶವಾಗಿತ್ತು. ಇದರಿಂದ ಚಿಕ್ಕರಾಜು ಜಿಲ್ಲಾ ಕೋರ್ಟ್ ನಿಂದ ಇಂಜೆಕ್ಷನ್ ಆರ್ಡರ್ ತಂದಿದ್ದರು. ಅದನ್ನು ಲೆಕ್ಕಿಸದೆ ಚಿಕ್ಕರಾಜು ಸಹೋದರ 17 ವರ್ಷದ ಫಲಕ್ಕೆ ಬಂದಿರುವ 200 ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಜೆಸಿಬಿಯಿಂದ ನಾಶ ಮಾಡಿದ್ದಾರೆ.ದಾಯಾದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


