ಮಡಿಕೇರಿ: ಕೊಡಗಿನ ಜೋಡುಪಾಲ, ಮದೆನಾಡು ಪ್ರದೇಶಗಳು ವಾಸಕ್ಕೆ ಯೋಗ್ಯವಾಗಿಲ್ಲ ಎಂದು ರಾಜ್ಯ ನೈಸರ್ಗಿಕ ನಿರ್ವಹಣೆ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ಹೇಳಿದ್ದಾರೆ.ಭೂ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ, ಗುಡ್ಡ ಪ್ರದೇಶದಲ್ಲಿ ನೀರು ಇಂಗಿ ಸ್ಫೋಟಗೊಂಡು ಹೊರಬಂದಿದೆ. ಮತ್ತೆ ಕೆಲವು ಕಡೆ ಗುಡ್ಡಗಳು ಕುಸಿದು ಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದರು.ಭಾರೀ ಮಳೆಯಿಂದಾಗಿ ಮಣ್ಣು ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಕಳೆದುಕೊಂಡ ಪರಿಣಾಮ ಅಂತರ್ಜಲ ಮಟ್ಟ ಏರಿ ಈ ಕುಸಿತ ಸಂಭವಿಸಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಮುಂದೆ ಪರಿಸ್ಥಿತಿಯನ್ನು ಯಾವ ರೀತಿ ಎದುರಿಸಬೇಕು ಎಂಬುದಕ್ಕೆ ಕ್ರಮ ಕೈಗೊಳ್ಳಬೇಕಿದೆ. ಇಲ್ಲಿನ ವಾತಾವರಣವನ್ನು ನೋಡಿದರೆ ಜನರಿಂದ ಯಾವುದೇ ರೀತಿಯ ತೊಂದರೆ ಆಗಿಲ್ಲ. ಈಗ ನಾವು ಪ್ರಾಥಮಿಕ ಮಾಹಿತಿ ಕಲೆ ಹಾಕಲು ಬಂದಿದ್ದು ಮುಂದೆ ಸಮಗ್ರ ಅಧ್ಯಯನಕ್ಕೆ ತಂಡ ಬರಲಿದೆ. ಘಟನೆಗೆ ಏನು ಕಾರಣ ಎಂಬ ಬಗ್ಗೆ 2 ತಿಂಗಳು ಅಧ್ಯಯನ ನಡೆಸಿ ವರದಿ ನೀಡಲಾಗುತ್ತದೆ ಎಂದು ವಿವರಿಸಿದರು.ಇಲ್ಲಿ ಜನರು ವಾಸಿಸಬಹುದೇ ಇಲ್ಲವೇ ಎಂಬುದನ್ನು ನೋಡಲು ಬಂದಿದ್ದೇವೆ. ಬಳಿಕ ಪರಿಸ್ಥಿತಿಯನ್ನು ಹೇಗೆ ಸರಿಪಡಿಸಲಾಗುತ್ತದೆ ಎಂಬುದನ್ನು ಕಂಡು ಕೊಳ್ಳಬೇಕಿದೆ ಪ್ರಕೃತಿ ವಿಕೋಪವನ್ನು ತಡೆಯಲು ಸಾಧ್ಯವಿಲ್ಲ. ಆದರೆ ನಾವು ಮಾಡಿರುವ ತಪ್ಪನ್ನು ಮುಂದೆ ಮಾಡದೇ ಇರುವ ಹಾಗೇ ನೋಡಿಕೊಳ್ಳಬೇಕಿದೆ ಎಂದು ಶ್ರೀನಿವಾಸರೆಡ್ಡಿ ಹೇಳಿದರು.ಬೋಪಯ್ಯ ತಿರುಗೇಟು: ಜೋಡುಪಾಲ ವಾಸ ಯೋಗ್ಯ ಅಲ್ಲವೆಂಬ ತಜ್ಞರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಬೋಪಯ್ಯ ಹತ್ತಾರು ವರ್ಷಗಳಿಂದ ವಾಸವಿದ್ದವರನ್ನು ಎಬ್ಬಿಸುವುದು ಸರಿಯಲ್ಲ ಎಂದಿದ್ದಾರೆ.ಸಂಪಾಜೆಯಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಪ್ರತಿಕ್ರಿಯಿಸಿದ ಅವರು, ಯಾವುದೇ ಹೋಮ್ ಸ್ಟೇಗಳಿದ್ದಲ್ಲಿ ಭೂ ಕುಸಿತ ಆಗಿಲ್ಲ, ಬರೀ ಬಡವರ ಮನೆಗಳಿರುವಲ್ಲಿ ಹೆಚ್ಚು ಭೂಕುಸಿತವಾಗಿ ನಾಶ ಆಗಿದೆ. ಹೋಮ್ ಸ್ಟೇ ಇಲ್ಲದ ಮೊಣ್ಣಂಗೇರಿ ಸ್ಥಳಗಳಲ್ಲಿ ಪೂರ್ತಿ ನಾಶವಾಗಿದೆ. ಒಂದು ವರ್ಷದಲ್ಲಿ ಬೀಳಬೇಕಾಗಿದ್ದ ಮಳೆ 15 ದಿನದಲ್ಲಿ ಬಿದ್ದ ಪರಿಣಾಮ ಈ ದುರ್ಘಟನೆಯಾಗಿದೆ ಎಂದು ಎಂದು ವಿಜ್ಞಾನಿಗಳ ಹೇಳಿಕೆಗೆ ತಿರುಗೇಟು ನೀಡಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


