ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಭೂ ಕುಸಿತಕ್ಕೆ ಕಾರಣವನ್ನು ತಿಳಿಯಲು ಇಸ್ರೋ ವಿಜ್ಞಾನಿಗಳು ಇಂದು ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಹಲವು ಭಾಗಗಳಿಗೆ ಭೇಟಿ ನೀಡಲಿದ್ದಾರೆ.ಕೊಡಗು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಿಂದಾಗಿ ಸಾಕಷ್ಟು ಕಡೆ ಭೂಕುಸಿತ ಉಂಟಾಗಿತ್ತು. ಇದರಿಂದಾಗಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾಗಿದ್ದಲ್ಲದೇ, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಇಷ್ಟು ವರ್ಷಗಳಲ್ಲಿ ಸಂಭವಿಸಿದ ಭೂ ಕುಸಿತ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಕುಸಿದಿರುವುದಕ್ಕೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಈ ಹಿನ್ನೆಲೆಯಲ್ಲಿ ಇಸ್ರೋದ ವಿಜ್ಞಾನಿಗಳು ಭೂ ಕುಸಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಇಸ್ರೋ ವಿಜ್ಞಾನಿಗಳ ತಂಡ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ಅಧ್ಯಯನ ನಡೆಸಲಿದ್ದಾರೆ. ಈ ವೇಳೆ ಕೊಡಗು ಜಿಲ್ಲೆಯ ಮದೆನಾಡು, ಜೋಡುಪಾಲ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ, ಕಲ್ಮಕಾರು ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


