ಉಡುಪಿ: ಇಲ್ಲಿನ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯದ್ದು ಸಹಜ ಸಾವು ಎಂದು ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬಂದಿದೆ ಎನ್ನಲಾಗಿದೆ.ಶಿರೂರು ಸ್ವಾಮೀಜಿಯವರದ್ದು ಅನುಮನಾಸ್ಪದ ಸಾವು ಪ್ರಕರಣವಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದರು. ಈ ಎರಡೂ ವರದಿಗಳನ್ನು ಹೋಲಿಕೆ ಮಾಡಿ ಅಂತಿಮ ವರದಿಯನ್ನು ಕೆಎಂಸಿ ವೈದ್ಯರು ನೀಡಲಿದ್ದಾರೆ. ಮರಣೋತ್ತರ ಪರೀಕ್ಷೆ ಅಂತಿಮ ವರದಿ ಎಫ್.ಎಸ್.ಎಲ್ ಇಂದು ಅಥವಾ ನಾಳೆ ಬರುವ ಸಾಧ್ಯತೆಯಿದೆ.ಮರಣೋತ್ತರ ವರದಿಯಲ್ಲಿ ಸಹಜ ಸಾವು ಎಂಬ ಉಲ್ಲೇಖವಿದೆ ಎನ್ನಲಾಗಿದೆ. ಶ್ರೀಗಳ ದೇಹದಲ್ಲಿ ವಿಷದ ಅಂಶವಿಲ್ಲ ಎಂಬ ವರದಿ ಪೊಲೀಸರ ಕೈಸೇರಿರುವ ಸಾಧ್ಯತೆ ಇದೆ. ಎರಡು ವರದಿ ಬಂದ ಬಳಿಕ ಸ್ವಾಮೀಜಿ ಸಾವಿಗೆ ಕಾರಣವನ್ನು ಮಣಿಪಾಲ ವೈದ್ಯರು ಪೊಲೀಸರಿಗೆ ವಿವರಿಸಲಿದ್ದಾರೆ.ಜುಲೈ 19ರಂದು ಸಾವನಪ್ಪಿದ್ದ ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಹೊಟ್ಟೆಯಲ್ಲಿ ವಿಷಕಾರಿ ಅಂಶ ಸಿಕ್ಕಿದೆ ಅಂತ ಕೆಎಂಸಿ ವೈದ್ಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಬಹುಅಂಗಾಂಗ ವೈಫಲ್ಯದಿಂದ ಸ್ವಾಮೀಜಿ ಸಾವನ್ನಪ್ಪಿದ್ದಾರೆ ಎಂದೂ ವೈದ್ಯರು ಹೇಳಿದ್ದರು. ಈ ಹೇಳಿಕೆ ನಂತರ ಸ್ವಾಮೀಜಿ ಸಾವು ಸಾಕಷ್ಟು ಚರ್ಚೆಗಳಿಗೆ, ಅನುಮಾನಗಳಿಗೆ ಕಾರಣವಾಗಿತ್ತು. ಪೊಲೀಸರಿಗೆ ತನಿಖೆ ಕೂಡಾ ಬಹಳ ಸವಾಲಿನದ್ದಾಗಿತ್ತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv






 Advertisement 




Sign in to your account
Username or Email Address


Password

 Remember Me


