ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಮಳೆರಾಯನ ಆರ್ಭಟ ಜೋರಾಗಿದ್ದು, ಮಳೆ ಸಾಕಪ್ಪ ಸಾಕು ಅನ್ನುವಷ್ಟರ ಮಟ್ಟಿಗೆ ರೌದ್ರ ನರ್ತನ ತೋರುತ್ತಿದ್ದಾನೆ. ಆದರೆ ಇನ್ನೊಂದು ಭಾಗದಲ್ಲಿ ಮಳೆಯ ಕೊರತೆಯಾಗಿದೆ.ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ ಜೋರಾಗಿಯೇ ಇತ್ತು. ಮಳೆ ಅನೇಕ ಅನಾಹುತಗಳನ್ನು ಸೃಷ್ಟಿ ಮಾಡಿದ್ದು, ನಿರೀಕ್ಷೆಗೂ ಮೀರಿ ವರುಣ ದೇವ ಕೃಪೆ ತೋರಿದ್ದಾನೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಶೇ. 25 ರಷ್ಟು ಮಳೆಯಾಗಿದೆ.ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯ ಕೊರತೆಯಾಗಿದ್ದು, ವಾಡಿಕೆಯಷ್ಟು ಮಳೆಯಾಗದೇ ಇರುವುದು ಜನರಲ್ಲಿ ಆತಂಕ ಮೂಡಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಮಳೆಯ ಕೊರತೆಯಾಗಿದೆ. ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಭಾಗದ 7 ಜಿಲ್ಲೆಗಳಲ್ಲಿ ಮಳೆಯ ಕೊರತೆಯಾಗಿದೆ.ಬೆಂಗಳೂರಿನಲ್ಲಿ ಕೂಡ ಈ ವರ್ಷ ಭಾರಿ ಮಳೆಯ ಕೊರತೆಯಾಗಿದ್ದು, ವಾಡಿಕೆಯಂತೆ 27 ಸೆ.ಮೀ ಮಳೆಯಾಗಬೇಕಿತ್ತು, ಆದರೆ ಕೇವಲ 17 ಸೆ.ಮೀ ಮಳೆಯಾಗಿದೆ. ಶೇ. 25 ರಷ್ಟು ಮಳೆ ಕೊರತೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಮಲೆನಾಡು ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಸದ್ಯ ಬೆಂಗಳೂರಿನಲ್ಲಿ ಕೂಡ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಒಟ್ಟಿನಲ್ಲಿ ವರುಣ ಒಂದು ಕಡೆ ಪ್ರವಾಹ ಸೃಷ್ಟಿ ಮಾಡಿದರೆ, ಇನ್ನೊಂದು ಕಡೆ ಬರಗಾಲ ಛಾಯೆ ಮೂಡಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


