ರಾಯಚೂರು: ಖಾಸಗಿ ಶಾಲೆಯೊಂದರಲ್ಲಿ (School) ತರಗತಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ (Student) ಕುಸಿದು ಬಿದ್ದು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.ತರುಣ್ ಅತ್ತನೂರು (14) ಮೃತ ದುರ್ದೈವಿ. ಸಿರವಾರ (Sirawara) ತಾಲೂಕಿನ ಅತ್ತನೂರು ಗ್ರಾಮದ ಎಂಟನೇ ತರಗತಿ ವಿದ್ಯಾರ್ಥಿ ತರುಣ್ ಎಂದಿನಂತೆ ಶಾಲೆಗೆ ಆಗಮಿಸಿದ್ದ. ಆದರೆ ಶಾಲೆಯಲ್ಲಿ ಲೋ ಬಿಪಿಯಿಂದ ಏಕಾಏಕಿ ಕುಸಿದು ಬಿದ್ದಿದ್ದ. ಈತನನ್ನು ಶಿಕ್ಷಕರು, ಸಿಬ್ಬಂದಿಗಳು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದನ್ನೂ ಓದಿ: Mysuru| ಕಲುಷಿತ ನೀರು ಸೇವನೆ ಶಂಕೆ- ಓರ್ವ ಸಾವು, 12 ಜನ ಅಸ್ವಸ್ಥಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಗ್ಯಾರಂಟಿಯಿಂದಾಗಿ ಅನುದಾನ ಸಿಗ್ತಿಲ್ಲ: ದರ್ಶನ್ ಪುಟ್ಟಣ್ಣಯ್ಯ


 Advertisement 







 Advertisement 




Sign in to your account
Username or Email Address


Password

 Remember Me


