ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗರಲ್ಲಿ ಓರ್ವ ನೀರಿನಲ್ಲಿ ಸಿಲುಕಿ ನಾಪತ್ತೆಯಾಗಿದ್ದು, ಐವರು ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಾವಿಕೊಡ್ಲ ಕಡಲ ತೀರದಲ್ಲಿ ನಡೆದಿದೆ.ಕೋಲಾರದ ಶ್ರೀನಿವಾಸಪುರದ ವಿನಯ ಎಸ್.ವಿ (22) ನೀರುಪಾಲಾದ ವಿದ್ಯಾರ್ಥಿಯಾಗಿದ್ದು, ಆತನ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ.ಬೆಂಗಳೂರಿನ ಖಾಸಗಿ ಫಾರ್ಮಸಿ ಕಾಲೇಜಿನ ಒಟ್ಟು 48 ವಿದ್ಯಾರ್ಥಿಗಳು ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರಲ್ಲಿ ಮೋಜು ಮಸ್ತಿ ಮಾಡಲು ತೆರಳಿ ಈ ಅವಘಡ ನಡೆದಿದೆ.ಅಪಾಯದಲ್ಲಿದ್ದವರನ್ನ ಗಮನಿಸಿ ಸ್ಥಳೀಯರಾದ ದುಬ್ಬಸಸಿಯ ಸರ್ವೇಶ ಮೊರ್ಜೆ ಮತ್ತು ಪಂಢರಿನಾಥ ಮೂರ್ಜೆ ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಇವರಿಗೆ ಕರಾವಳಿ ಕಾವಲು ಪೊಲೀಸ್ ಪಡೆಯವರು ಸಹಕರಿಸಿ ಹರಸಾಹಸ ಪಟ್ಟು ಒಟ್ಟು ಐವರನ್ನು ದಡಕ್ಕೆ ತಂದು ಪ್ರಾಣ ಉಳಿಸಿದ್ದಾರೆ.ಅಸ್ವಸ್ಥಗೊಂಡ 5 ವಿದ್ಯಾರ್ಥಿಗಳನ್ನು ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸ ಕೊಡಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಕುಮಟಾಕ್ಕೆ ಸಾಗಿಸಲಾಗಿದೆ.ಪಿ.ಐ. ವಸಂತ್ ಆಚಾರ್, ಪಿ.ಎಸ್.ಐ. ಖಾದರ್ ಬಾಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆSign in to your account
Username or Email Address


Password

 Remember Me


