ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಂಗಳವಾರವಷ್ಟೇ ಅಭ್ಯರ್ಥಿಗಳೆಲ್ಲಾ ನಾಮಪತ್ರ ಸಲ್ಲಿಸಿ ಪ್ರಚಾರದ ಬ್ಯುಸಿಯಲ್ಲಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಗ್ ಶಾಕ್ ಆಗಿದೆ.ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ವೇಳೆ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳ ನಾಮಪತ್ರ ರದ್ದಾಗುವ ಸಾಧ್ಯತೆ ಇದೆ. ಸಾಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಗೋಡು ತಿಮ್ಮಪ್ಪ ನಾಮಪತ್ರದಲ್ಲಿ ಪತ್ನಿ ಮತ್ತು ಅವಲಂಬಿತರ ಮಾಹಿತಿ, ಚಿನ್ನಾಭರಣ ವಿವರ, ಶೈಕ್ಷಣಿಕ ವಿವರವನ್ನೂ ಸಮರ್ಪಕವಾಗಿ ನಮೂದಿಸಿಲ್ಲ ಹೀಗಾಗಿ ನಾಮಪತ್ರ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.ಬೆಂಗಳೂರಿನ ರಾಜಾಜಿನಗರದ ಅಭ್ಯರ್ಥಿ ಪದ್ಮಾವತಿಯವರು ಮತ್ತು ಅವರ ಪುತ್ರ ಬ್ಯಾಂಕ್ ಸಾಲ ಪಡೆದು ವಂಚನೆ ಪ್ರಕರಣ ಇರುವುದರಿಂದ ನಾಮಪತ್ರ ಪರಿಶೀಲನೆಗೆ ಚುನಾವಣಾ ಆಯೋಗ ತಡೆ ಹಿಡಿದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ಶಾಸಕ ಹಾಗೂ ಮುಳಬಾಗಿಲು ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಜಿ.ಮಂಜುನಾಥ್ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಾಮಪತ್ರ ಅಸಿಂಧು ಮಾಡಲಾಗಿದೆ.Sign in to your account
Username or Email Address


Password

 Remember Me


