ಮಡಿಕೇರಿ: ಕೊಡಗು ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ವಿರಾಜಪೇಟೆ ಟಿಕೆಟ್ ಕೈ ತಪ್ಪಿದ್ದಕ್ಕೆ ರಾಜ್ಯ ಅರಣ್ಯ ನಿಗಮದ ಉಪಾಧ್ಯಕ್ಷೆಯಾಗಿದ್ದ ಪದ್ಮಿನಿ ಪೊನ್ನಪ್ಪ ಪಕ್ಷದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.ಕೈ ಅಭ್ಯರ್ಥಿ ಅರುಣ್ ಮಾಚಯ್ಯರನ್ನು ಸೋಲಿಸಲು ನಿರ್ಧರಿಸಿರುವ ಪದ್ಮಿನಿ ಪೊನ್ನಪ್ಪರನ್ನ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜಾತ್ಯಾತೀತ ನೆಲೆಗಟ್ಟಿನ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲಿಸುವ ಸಾಧ್ಯತೆ ಇದೆ.ಸುಮಾರು 3 ದಶಕಗಳಿಂದ ಕಾಂಗ್ರೆಸ್‍ನಲ್ಲಿ ಸೇವೆ ಸಲ್ಲಿಸಿದ್ದ ಇವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡದಿದ್ದಕ್ಕೆ ಬೇಸರಗೊಂಡು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.Sign in to your account
Username or Email Address


Password

 Remember Me


