ಬೆಂಗಳೂರು: ಮೇ 12ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡಿ ಎಂದು ಮೈಸೂರಿನ ಒಡೆಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತದಾರರಲ್ಲಿ ಮನವಿ ಮಾಡಿದ್ದಾರೆ.ಬೆಂಗಳೂರು ಹೊರವಲಯದ ನೆಲಮಂಗಲ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅರಮನೆ ಭೇಟಿ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ. ಎಲ್ಲಾ ಪಕ್ಷದವರೊಂದಿಗೆ ನಮಗೆ ಉತ್ತಮ ಭಾಂದವ್ಯ ಇದೆ. ರಾಜಕೀಯ ನಾಯಕರು ಅರಮನೆಗೆ ಭೇಟಿ ನೀಡಿದ್ದರು. ಅದು ವೈಯಕ್ತಿಕ ವಿಚಾರ ಎಂದು ತಿಳಿಸಿದರು.ಇನ್ನೂ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ ಅವರು, ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ. ನಾನು ಚುನಾವಣೆಯಿಂದ ದೂರ ಇರುತ್ತೇನೆ ಎಂದು ತಿಳಿಸಿದರು.Sign in to your account
Username or Email Address


Password

 Remember Me


