ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ತಂದೆಯ ಪರ ಪ್ರಚಾರ ನಡೆಸಲು ತೆರಳಿದ್ದ ಶಾಸಕರ ಪುತ್ರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದಿದೆ.ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ ಸುರೇಶ್ ಗೌಡರ ಪುತ್ರಿ ಐಶ್ವರ್ಯ ತಮ್ಮ ತಂದೆಯ ಪರ ಮತಯಾಚನೆ ಮಾಡಲು ಕ್ಷೇತ್ರದ ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಗೊಲ್ಲಳ್ಳಿ ಗ್ರಾಮಸ್ಥರು ಶಾಸಕರು ತಮ್ಮ ಗ್ರಾಮಕ್ಕೆ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ. ಅಭಿವೃದ್ಧಿ ಮಾಡದಿದ್ದರೂ ಮತ ಕೇಳಲು ಮಾತ್ರ ಬರುತ್ತೀರಿ ಎಂದು ಆರೋಪಿಸಿ ತರಾಟೆ ತೆಗೆದುಕೊಂಡಿದ್ದಾರೆ.ಈ ವೇಳೆ ಐಶ್ವರ್ಯ ಗ್ರಾಮಸ್ಥರ ಪ್ರಶ್ನೆಗಳ ಸುರಿಮಳೆಗೆ ಸಮಾಜಾಯಿಸಿ ನೀಡಲು ಯತ್ನಿಸಿದ್ದಾರೆ. ಆದರೆ ಬಳಿಕ ಗ್ರಾಮಸ್ಥರ ಅಸಮಾಧಾವನ್ನು ಶಮನಗೊಳಿಸಲು ವಿಫಲರಾಗಿ ಸ್ಥಳದಿಂದ ಹಿಂದಿರುಗಿದ್ದಾರೆ.https://www.youtube.com/watch?v=9lt3Z0DUPx8Sign in to your account
Username or Email Address


Password

 Remember Me


