ಬೆಳಗಾವಿ: ಸ್ನೇಹಿತರ ಭೇಟಿಗೆ ಬಂದಿದ್ದ ಯೋಧನ (Soldier) ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಗಣೇಶಪುರದಲ್ಲಿ ನಡೆದಿದೆ.ಮಹಾರಾಷ್ಟ್ರದ (Maharashtra) ಚಂದಗಡ ಮೂಲದ ಪರುಶುರಾಮ್ ಪಾಟೀಲ್ ಹಲ್ಲೆಗೊಳಗಾದ ಯೋಧ. ನಗರದ ಬಾರ್ ಎದುರು ನಡುರಸ್ತೆಯಲ್ಲೇ ಯೋಧನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾಲಿನಿಂದ ಒದ್ದು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ- ಸಚಿವರ ಪರ ವಾಲ್ಮೀಕಿ ಶ್ರೀ ಬ್ಯಾಟಿಂಗ್ಹಲ್ಲೆಯಿಂದ ಅಸ್ವಸ್ಥನಾಗಿದ್ದ ಯೋಧನನ್ನು ತಕ್ಷಣವೇ ಅಂಬುಲೆನ್ಸ್ ಮೂಲಕ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂರು ದಿನಗಳ ಹಿಂದೆ ಯೋಧನ ಮೇಲೆ ಹಲ್ಲೆಗೈಯಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೈದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಯೋಧ ಪರುಶುರಾಮ್ ಜಮ್ಮುವಿನಲ್ಲಿ (Jammu) ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಬೆಳಗಾವಿಯ (Belagavi) ಕ್ಯಾಂಪ್ ಪೊಲೀಸ್ (Police) ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಭಾರತದ ಸೇನೆಗೆ AI ತಂತ್ರಜ್ಞಾನದ ಬಲ – ಏನಿದರ ಮಹತ್ವ?Sign in to your account
Username or Email Address


Password

 Remember Me


