ಕೋಲಾರ: ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ರಾಜ್ಯಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿ, ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.ಕೋಲಾರದ ಮುಳಬಾಗಿಲು ನಗರದಲ್ಲಿ ರೋಡ್ ಶೋ ಸಂದರ್ಭದಲ್ಲಿ ಪೊಲೀಸ್ ಪೇದೆಯೊಬ್ಬರಿಗೆ ರಾಹುಲ್ ಗಾಂಧಿ ಟೋಪಿ ತೊಡಿಸಿದ ಘಟನೆ ನಡೆಯಿತು. ರಾಹುಲ್ ರೋಡ್ ಶೋಗೆ ಬಂದೋಬಸ್ತ್ ಮಾಡುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿದ್ದು, ಈ ಸಂದರ್ಭದಲ್ಲಿ ಪೊಲೀಸ್ ಪೇದೆಯೊಬ್ಬರ ಟೋಪಿ ಕೆಳಗೆ ಬೀಳುತ್ತಿತ್ತು. ಟೋಪಿ ಕೆಳಗೆ ಬೀಳುತ್ತಿದ್ದಂತೆಯೇ ರಾಹುಲ್ ಅದನ್ನು ಕ್ಯಾಚ್ ಹಿಡಿದು ಪೊಲೀಸ್ ಪೇದೆಯ ತಲೆಗೆ ಇರಿಸಿದ್ದಾರೆ. ಇದನ್ನೂ ಓದಿ: ದೂರದಿಂದ್ಲೇ ಗುರಿಯಿಟ್ಟು ರಾಹುಲ್ ಕೊರಳಿಗೆ ಹಾರ ಎಸೆದ ಅಭಿಮಾನಿ- ವಿಡಿಯೋ ಫುಲ್ ವೈರಲ್ಕೋಲಾರ ಜಿಲ್ಲೆಯ 4 ವಿಧಾನ ಸಭಾ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಜನಾರ್ಶೀವಾದ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮುಳಬಾಗಿಲಿಗೆ ಆಗಮಿಸಿದ್ದ ರಾಹುಲ್, ಮುಳಬಾಗಿಲು ಕುರುಡುಮಲೆ ವಿನಾಯಕನಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ರೋಡ್ ಶೋ ಆರಂಭಿಸಿದ್ದಾರೆ.ಮುಳಬಾಗಿಲು, ಕೆಜಿಎಫ್ ಬಂಗಾರಪೇಟೆ, ಕೋಲಾರ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ಮಾಡಿದ್ದು, ಕೋಲಾರ ನಗರದಲ್ಲಿ ಮುಖಂಡರೊಂದಿಗೆ ಕಾರ್ನರ್ ಸಭೆ ನಡೆಸಿದ್ದಾರೆ. ಈ ವೇಳೆ ರಾಹುಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ರಾಜ್ಯ ಉಸ್ತುವಾರಿ ವೇಣುಗೋಪಾಲ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಕುಮಾರ್, ಸಂಸದ ಕೆ.ಎಚ್.ಮುನಿಯಪ್ಪ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ದಾರೆ.Sign in to your account
Username or Email Address


Password

 Remember Me


