ಹಾಸನ: ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಯಲ್ಲಿ ಇದ್ದರು, ಹಾಸನ ಮಂತ್ರಿಗಳ ಕಚೇರಿಯ ಮುಂಬಾಗಿಲಿಗೆ ಬೀಗ ಹಾಕಿ ಒಳಗೆ ಸಿಬ್ಬಂದಿ  ಕಾರ್ಯನಿರ್ವಹಿಸುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರೋಹಿಣಿ ಅವರು ಸಚಿವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.ಸಚಿವ ಎ.ಮಂಜು ಕಚೇರಿಯಲ್ಲಿ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದ್ದರು, ಆದರೆ ಈ ವೇಳೆ ಎಷ್ಟೇ ಪ್ರಯತ್ನ ಮಾಡಿದರು ಸಿಬ್ಬಂದಿ ಕಚೇರಿ ಬಾಗಿಲು ತೆರೆಯದ ಕಾರಣ ಜಿಲ್ಲಾಧಿಕಾರಿಗಳು ಕಚೇರಿಯನ್ನು ವಶಕ್ಕೆ ಪಡೆಯಲು ಆದೇಶ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ಡಿಸಿ ಕಚೇರಿ ಸಿಬ್ಬಂದಿ ಮತ್ತೊಂದು ಬೀಗ ಜಡಿದಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರು ಕಚೇರಿಯಲ್ಲಿ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ಸಂಬಂಧ ಅವರನ್ನು ಪರಿಶೀಲನೆ ನಡೆಸಿದ ಬಳಿಕ ಹೊರಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ನೀತಿ ಸಂಹಿತೆ ಜಾರಿ ಬಳಿಕ ಸರ್ಕಾರಿ ಕಟ್ಟಡ ದುರ್ಬಳಕೆ ಆರೋಪ ಇದಾಗಿದ್ದು, ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಿಗೆ ಚುನಾಣಾಧಿಕಾರಿಯಿಂದ ನೋಟಿಸ್ ಜಾರಿಯಾಗಿದೆ. ಚುನಾವಣಾ ಸಿಬ್ಬಂದಿ ಸ್ಥಳಪರಿಶಿಲನೆ ವೇಳೆ ಹೊರಗಿನಿಂದ ಬೀಗಹಾಕಿ ಒಳಗೆ ಕೆಲಸಮಾಡಲಾಗುತ್ತಿತ್ತು ಎಂಬ ಬಗ್ಗೆ ಉಲ್ಲೇಖಿಸಿ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೇ ನೀತಿ ಸಂಹಿತೆ ಜಾರಿಯಾದ ಬಳಿಕವೂ ಸರ್ಕಾರಿ ಕಟ್ಟಡವನ್ನ ರಾಜಕೀಯ ವ್ಯಕ್ತಿಗಳಿಗೆ ಬಿಟ್ಟು ಕೊಟ್ಟ ಕುರಿತು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಏಪ್ರಿಲ್ 2 ರೊಳಗೆ ಉತ್ತರ ನೀಡಲು ಸೂಚನೆ ನೀಡಲಾಗಿದೆ. Sign in to your account
Username or Email Address


Password

 Remember Me


