ಮಂಗಳೂರು: ವಿಧಾನಸಭಾ ಚುನಾವಣೆ ಘೋಷಣೆ ಮಧ್ಯೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯ್ದೀನ್ ಬಾವಾ ದೈವಸ್ಥಾನಕ್ಕೆ ಭೇಟಿ ನೀಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.ಇತ್ತೀಚೆಗೆ ಸುರತ್ಕಲ್ ಬಳಿಯ ಹೊಸಬೆಟ್ಟು ಎಂಬಲ್ಲಿರುವ ಕೋರ್ದಬ್ಬು ದೈವಸ್ಥಾನಕ್ಕೆ ಮೊಯ್ದೀನ್ ಬಾವಾ ಭೇಟಿ ನೀಡಿದ್ದರು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ದೈವಸ್ಥಾನದವರ ಆಮಂತ್ರಣದ ಮೇರೆಗೆ ಶಾಸಕರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.ಚುನಾವಣೆ ಸಂದರ್ಭದಲ್ಲಿ ಶಾಸಕ ಮೊಯ್ದೀನ್ ಬಾವ, ಹಿಂದೂಗಳ ಮತ ಸೆಳೆಯಲು ದೈವಸ್ಥಾನಕ್ಕೆ ಭೇಟಿ ನೀಡಿದ್ದಾಗಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ. ಆದರೆ ವಿಡಿಯೋದಲ್ಲಿ ಮೊಯ್ದೀನ್ ಬಾವಾ ಎಂದಿನಂತೆ ದೇವಸ್ಥಾನಕ್ಕೆ ತೆರಳಿ ಹಿಂದಿರುಗಿದ್ದಾರೆ.ಓಲೈಕೆಯ ರಾಜಕಾರಣವೇ ಆಗಿದ್ದರೂ, ಮೂಲಭೂತವಾದಿ ಮುಸ್ಲಿಮರು ಮಾತ್ರ ಈ ವಿಡಿಯೋವನ್ನು ವೈರಲ್ ಮಾಡಿದ್ದಲ್ಲದೆ, ಶಾಸಕರ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ. ಹಿಂದೂ ಮತಗಳನ್ನು ಪಡೆಯಲು ಶಾಸಕ ಬಾವಾ ಈ ರೀತಿಯ ನಾಟಕವಾಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಲಾಗಿದೆ. ಆದರೆ ಶಾಸಕ ಬಾವಾ ಮಾತ್ರ, ಪ್ರತೀವರ್ಷದಂತೆ ಈ ಬಾರಿಯೂ ಭೇಟಿ ನೀಡಿದ್ದೇನೆ. ಇದರಲ್ಲಿ ಯಾವುದೇ ರೀತಿಯ ರಾಜಕೀಯವಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.Sign in to your account
Username or Email Address


Password

 Remember Me


