ರಾಯಚೂರು: ನಗರದ ವೈಟಿಪಿಎಸ್‍ನಲ್ಲಿ ಭೀಕರ ಅವಘಡವೊಂದು ಸಂಭವಿಸಿದ ಪರಿಣಾಮ ಕಾರ್ಮಿಕ ಗಂಭೀರವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ರಾಯಚೂರಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ರೈಲ್ವೆ ಹಳಿಗಾಗಿ ಭೂಮಿ ಅಗೆಯುವಾಗ ಮಣ್ಣು ಕುಸಿದು ಬಿದ್ದುದರಿಂದ 30 ಅಡಿ ಆಳದಲ್ಲಿದ್ದ ಕಾರ್ಮಿಕ ಮಣ್ಣಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೆ ಗಾಯಾಳು 25 ವರ್ಷದ ಕಾಂತರಾಜ್ ನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದು, ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಗೆ ರವಾನೆ ಮಾಡಲಾಗಿದೆ.ಘಟನೆ ಸಂಬಂಧ ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


