– ರಾಜ್ಯದಲ್ಲಿ ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲುಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ದ ಬರ ಪರಿಹಾರಕ್ಕೆ (Drought Relief) ಅನುದಾನ ಬಿಡುಗಡೆ ಮಾಡಿಲ್ಲ ಅಂತ ಆರೋಪ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದೆ. SDRF ಅಡಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ ಮಾಡಿತ್ತು. ಅಲ್ಲದೆ, ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕೆ ಅಂತ 17 ಸಾವಿರ ಕೋಟಿ ರೂ. ಪರಿಹಾರ ಕೇಳಿದೆ. ಈವರೆಗೂ ಕೇಂದ್ರ ಸರ್ಕಾರ ಒಂದೂ ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ ಅಂತ ಸಿಎಂ ಹಾದಿಯಾಗಿ ಸಚಿವರು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅಂತ 324 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆಯಾವ ಜಿಲ್ಲೆಗೆ ಎಷ್ಟು ಅನುದಾನ?
ಬೆಂಗಳೂರು ನಗರ- 7.50 ಕೋಟಿ.
ಬೆಂಗಳೂರು ಗ್ರಾಮಾಂತರ- 6 ಕೋಟಿ.
ರಾಮನಗರ-7.50 ಕೋಟಿ.
ಕೋಲಾರ – 9 ಕೋಟಿ.
ಚಿಕ್ಕಬಳ್ಳಾಪುರ- 9 ಕೋಟಿ.
ತುಮಕೂರು-15 ಕೋಟಿ.
ಚಿತ್ರದುರ್ಗ- 9 ಕೋಟಿ.
ದಾವಣಗೆರೆ- 9 ಕೋಟಿ.
ಚಾಮರಾಜನಗರ-7.50 ಕೋಟಿ
ಮೈಸೂರು – 13.50 ಕೋಟಿ.
ಮಂಡ್ಯ- 10.50 ಕೋಟಿ.
ಬಳ್ಳಾರಿ- 7.50 ಕೋಟಿ.
ಕೊಪ್ಪಳ- 10.50 ಕೋಟಿ.
ರಾಯಚೂರು- 9 ಕೋಟಿ.
ಕಲಬುರ್ಗಿ- 16.50 ಕೋಟಿ.
ಬೀದರ್- 4.50 ಕೋಟಿ.
ಬೆಳಗಾವಿ- 22.50 ಕೋಟಿ.
ಬಾಗಲಕೋಟೆ- 13.50 ಕೋಟಿ.
ವಿಜಯಪುರ- 18 ಕೋಟಿ.
ಗದಗ-10.50 ಕೋಟಿ.
ಹಾವೇರಿ-12 ಕೋಟಿ.
ಧಾರವಾಡ-12 ಕೋಟಿ.
ಶಿವಮೊಗ್ಗ-10.50 ಕೋಟಿ.
ಹಾಸನ- 12 ಕೋಟಿ.
ಚಿಕ್ಕಮಗಳೂರು-12 ಕೋಟಿ.
ಕೊಡಗು-7.50 ಕೋಟಿ.
ದಕ್ಷಿಣ ಕನ್ನಡ- 3 ಕೋಟಿ.
ಉಡುಪಿ- 4.50 ಕೋಟಿ.
ಉತ್ತರ ಕನ್ನಡ-16.50 ಕೋಟಿ.
ಯಾದಗಿರಿ-9 ಕೋಟಿ.
ವಿಜಯನಗರ-9 ಕೋಟಿ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


