ತುಮಕೂರು: ಜಾತಿ ನೋಡಿ ಮತ ಹಾಕಬೇಡಿ, ಜಾತಿ ನೋಡಿ ಮರ್ಯಾದೆ ಕೊಡಬೇಡಿ ಎಂದು ನಟ ಶಿವರಾಜ್‍ಕುಮಾರ್ ಅಭಿಮಾನಿಗಳಗೆ ಸಲಹೆ ನೀಡಿದ್ದಾರೆಸಿದ್ದಗಂಗಾ ಮಠ ಆಧರಿಸಿದ ಭೂಸ್ವರ್ಗ ಚಿತ್ರದ ಧ್ವನಿ ಸುರುಳಿ ಬಿಡುಗಡೆಗೆಂದು ಭಾನುವಾರದಂದು ನಟ ಶಿವರಾಜ್ ಕುಮಾರ್ ತುಮಕೂರಿನ ಉಡುಪಿ ಡಿಲಕ್ಸ್ ಗೆ ಹೋಗಿದ್ದರು. ಧ್ವನಿ ಸುರುಳಿ ಬಿಡುಗಡೆ ವೇಳೆ ಮಾತನಾಡಿದ ಶಿವಣ್ಣ, ಜಾತಿ ನೋಡಿ ಮತ ಹಾಕಬೇಡಿ, ಜಾತಿ ನೋಡಿ ಮರ್ಯಾದೆ ಕೊಡಬೇಡಿ ಎಂದು ಅಭಿಮಾನಿಗಳಿಗೆ ಸಲಹೆ ನೀಡಿದ್ರು.ಸಿದ್ದಗಂಗಾ ಮಠಕ್ಕೆ ಏನೋ ಒಂದು ಪವರ್ ಇದೆ. ಮಠದ ಮಹಿಮೆಯೋ ಏನೋ ಎಲ್ಲಾ ಜಾತಿಗಳನ್ನು ಒಗ್ಗೂಡಿಸುತ್ತದೆ. ಮಠದಲ್ಲಿ ಜಾತಿ ಬೇಧ ಭಾವ ಇಲ್ಲಾ. ಅಂತಹ ಮಹಾನ್ ಮಠ ಹಾಕಿಕೊಟ್ಟ ಹಾದಿಯಲ್ಲಿ ನಾವು ಸಾಗಬೇಕು. ಹಾಗಾಗಿ ಜಾತಿ ನೋಡಿ ಮತ ಹಾಕಬೇಡಿ. ಒಳ್ಳೆ ಮನುಷ್ಯನಿಗೆ, ಒಳ್ಳೆ ಕೆಲಸ ಮಾಡೋರಿಗೆ ವೋಟ್ ಹಾಕಿ ಎಂದು ಹೇಳಿದ್ರು.ಈ ವೇಳೆ ಕಾರ್ಯಕ್ರಮ ನಡೆಯುತ್ತಿದ್ದಾಗ ಅಭಿಮಾನಿಗಳು ಮೊಬೈಲ್ ನಿಂದ ವಿಡಿಯೋ ಮಾಡುತ್ತಿದ್ದು, ಇದರಿಂದ ಕಿರಿಕಿರಿ ಅನುಭವಿಸಿದ ನಟ, ಪ್ಲೀಸ್ ಸೈಲೆನ್ಸ್ ಸೈಲೆನ್ಸ್ ಎಂದು ಒಂದೇ ಸಮನೇ ಕೂಗಿದ್ರು. ಅಲ್ಲದೇ ಮೊಬೈಲ್ ಯಾವ ಪುಣ್ಯಾತ್ಮ ಕಂಡು ಹಿಡಿದಿದ್ದಾನೋ ಎಂದು ಶಿವಣ್ಣ ರೇಗಿದ್ರು.ಶಿವರಾಜ್ ಕುಮಾರ್ ರನ್ನು ಸುತ್ತುವರಿದು ಅಭಿಮಾನಿಗಳು ಕಿರಿಕಿರಿ ಉಂಟು ಮಾಡಿದ್ದರಿಂದ ಅವರ ಮೇಲೆ ರೇಗಿದರು ಎಂದು ಹೇಳಲಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಅಭಿಮಾನಿಗಳ ವಿರುದ್ಧ ಗರಂ ಆದ ಶಿವರಾಜ್ ಕುಮಾರ್!Sign in to your account
Username or Email Address


Password

 Remember Me


