ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿರುವ ಟ್ವೀಟ್ ಸಿದ್ದರಾಮಯ್ಯ ಅವರ ಸರ್ಕಾರ 10% ಸರ್ಕಾರ ಆಗಿದೆ ಎನ್ನುವುದಕ್ಕೆ ಸಾಕ್ಷಿ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂಪ್ಪ ಟ್ವೀಟ್ ಮಾಡಿದ್ದಾರೆ.At last someone’s conscience in @INCKarnataka prodded him to speak up! @moilyv ji is right. We have been saying that @siddaramaiah is #10PercentCM. With contractors filling PWD min's deep pockets, state's coffers & roads are in tatters. Congress veteran’s view validates our point https://t.co/OpaWh1ZwPG— B.S.Yediyurappa (@BSYBJP) March 16, 2018ರಾಜ್ಯದ ಕಾಂಗ್ರೆಸ್ ಸರ್ಕಾರ 10% ಸರ್ಕಾರ ಎಂದು ಸಾಬೀತು ಪಡಿಸಲು ನಾವು ಈಗಾಗಲೇ ಹಲವು ದಾಖಲೆಗಳ ಹಾಗೂ ಪುರಾವೆಗಳನ್ನು ಒದಗಿಸಿದ್ದೇವು. ಆದರೆ ಸಿಎಂ ಅವುಗಳನ್ನು ಸುಳ್ಳು ಎಂದು ಪ್ರತಿಪಾದಿಸಿದ್ದರು. ಇಂದು ಕಾಂಗ್ರೆಸ್ ಹಿರಿಯ ನಾಯಕರೇ ಇದಕ್ಕೆ ಸಾಕ್ಷಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಯೋಜನೆ ನಡೆಯಬೇಕಾದರು ಕಮಿಷನ್ ನೀಡಬೇಕೆಂಬ ಸತ್ಯ ಹೊರಬಂದಿದೆ. ಪಿಡಬ್ಲೂಡಿ ಸಚಿವರು ಗುತ್ತಿಗೆದಾರರೊಂದಿಗೆ ಸೇರಿ ತಮ್ಮ ಬೊಕ್ಕಸವನ್ನು ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಬಿಎಸ್‍ವೈ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.`ಕಾಂಟ್ರಾಕ್ಟರ್ ಗಳ ಕೈಲಿ ಕಾಂಗ್ರೆಸ್ ಟಿಕೆಟ್’ ಎಂದು ಬರೆದು ಕಾಂಗ್ರೆಸ್‍ನಲ್ಲಿ ಹಣದ ಹೊಂದಾಣಿಕೆಯಿಂದ ಅಭ್ಯರ್ಥಿಗಳನ್ನು ನಿರ್ಧರಿಸುವಂತಾಗಿದೆ ಅಂತ ಪಕ್ಷದ ವಿರುದ್ಧ ನೇರವಾಗಿ ಮೊಯ್ಲಿ ತಮ್ಮ ಟ್ವೀಟ್ ನಲ್ಲಿ ಆರೋಪ ಮಾಡಿದ್ದರು. ಈ ಟ್ವೀಟನ್ನು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದರು. ಅಲ್ಲದೇ ಮೊಹ್ಲಿ ಅವರ ಟ್ವೀಟ್ ಗೆ ಅವರ ಪುತ್ರ ಸಹ ಮರುಟ್ವೀಟ್ ಮಾಡಿದ್ದರು.ನವದೆಹಲಿಯಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಟ್ವೀಟ್ ಮಾಡಿರುವುದು ನಾನಲ್ಲ. ಇದು ನನ್ನ ಅನಧಿಕೃತ ಟ್ವೀಟ್ ಖಾತೆಯಾಗಿದೆ. ನನ್ನ ಮಗ ಕೂಡ ಇಂತಹ ಟ್ವೀಟ್ ಮಾಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.#10PercentCM ಸಿದ್ದರಾಮಯ್ಯನವರದ್ದು 'ಕಮಿಷನ್ ಸರ್ಕಾರ' ಎಂದು ಇಲ್ಲಿ ತನಕ ಹಲವಾರು ಪುರಾವೆ ಒದಗಿಸಿದ್ದೇವೆ. ಆದರೂ CM ರವರು ಅದೆಲ್ಲಾ ಸುಳ್ಳು ಎಂದು ಪ್ರತಿಪಾದಿಸುತ್ತ ಮತ್ತೆ ಮತ್ತೆ ಹಸಿ ಸುಳ್ಳುಗಳ ಬೇಲಿ ಕಟ್ಟುತ್ತಿದ್ದಾರೆ. "ಸುಳ್ಳಿನ ಬೇಲಿಯ ಮುಳ್ಳು ಚುಚ್ಚುವುದೆಂದೆಂದೂ ಸುಳ್ಳಿನ ಬೇಲಿಗಿಂತ ದಿಟದಬಯಲೇ ಲೇಸು ಕೇಳೆನ್ನ ಮತ್ತಿತಾಳಯ್ಯ"— B.S.Yediyurappa (@BSYBJP) March 15, 2018Sign in to your account
Username or Email Address


Password

 Remember Me


