ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನ ವರ್ಗಾವಣೆ ಮಾಡಿ ಅಂತ ಸ್ವತಃ ಶಿಕ್ಷಣ ಸಚಿವ ತನ್ವೀರ್ ಸೇಠ್, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.ಪೋಷಕರ ಹಾಗೂ ಮಕ್ಕಳ ಮಾಹಿತಿಯನ್ನ ಖಾಸಗಿ ಸಂಸ್ಥೆಗೆ ನೀಡುವ ಕುರಿತು ಎಂಓಯು ಮಾಡಿಕೊಂಡಿದ್ದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸಚಿವರ ಮಾತನ್ನು ಶಾಲಿನಿ ರಜನೀಶ್ ಮೀರಿದ್ರು. ಸಚಿವರ ಮಾತು ಕೇಳದೆ ನಿರ್ಧಾರಗಳನ್ನ ತೆಗೆದುಕೊಂಡಿದ್ರು. ಇದರಿಂದ ಆಕ್ರೋಶಗೊಂಡಿರುವ ಸಚಿವ ತನ್ವೀರ್ ಸೇಠ್, ಶಾಲಿನಿ ರಜನೀಶ್ ಅವರನ್ನು ಶಿಕ್ಷಣ ಇಲಾಖೆಯಿಂದ ವರ್ಗಾವಣೆ ಮಾಡಿ ಅಂತ ಸಿಎಂಗೆ ಪತ್ರ ಬರೆದಿದ್ದಾರೆ.ಅಲ್ಲದೆ ಈ ಹಿಂದೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಅಜಯ್ ಸೇಠ್‍ರನ್ನ ಪ್ರಭಾರ ಕೆಲಸ ನಿರ್ವಹಿಸಲು ಆದೇಶ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರದಲ್ಲಿ ತನ್ವೀರ್ ಸೇಠ್ ಮನವಿ ಮಾಡಿದ್ದಾರೆ.Sign in to your account
Username or Email Address


Password

 Remember Me


