ಬೆಂಗಳೂರು: ಕಾಲೇಜಿನ ದಾಖಲಾತಿ ಪರಿಶೀಲನೆ ಮಾಡಲು ಹೋಗಿ ಬರೋಬ್ಬರಿ ಒಂದು ಕೋಟಿ ರೂ. ಹಣವನ್ನು ಅಧಿಕಾರಿಗಳು ದೋಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧಿಕಾರಿಗಳ ಮೇಲೆ ಈ ಆರೋಪ ಕೇಳಿಬಂದಿದೆ. ಪರೀಕ್ಷೆಗೆ ನಕಲಿ ಪ್ರವೇಶ ಪತ್ರ ನೀಡುತ್ತಾರೆಂಬ ಆರೋಪದ ಮೇಲೆ ನಂದಿನಿ ಲೇಔಟ್ ನಲ್ಲಿರೋ ಬೆಥೆಲ್ ಕಾಲೇಜಿನ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ಮಾಡಿದ ಬಳಿಕ ದಾಖಲಾತಿಗಳನ್ನು ಎತ್ತಿಕೊಳ್ಳೋದು ಅಲ್ಲದೇ ಹಣವನ್ನು ದೋಚಿದ್ದಾರೆಂಬ ಆರೋಪ ಕೇಳಿ ಬಂದಿದೆ.ವಿಶ್ವವಿದ್ಯಾಲಯದ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಅಧಿಕಾರಿಗಳ ವಿರುದ್ಧವೇ ಕಾಲೇಜಿನ ಮಾಲೀಕರು ದೂರು ನೀಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


