ಬೆಳಗಾವಿ: ನಾಲ್ಕು ದಿನಗಳಿಂದ ಒಂದೇ ಜಾಗದಲ್ಲಿ ಬೀಡು ಬಿಟ್ಟಿದ್ದ ಎರಡು ಹಾವುಗಳನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ.ನಾಲ್ಕು ದಿನಗಳ ಹಿಂದೆ ಸಾತಪ್ಪ ಅಂಬಿ ಎಂಬವರಿಗೆ ಸೇರಿದ ಮನೆಯ ಜಾನುವಾರು ಕೊಟ್ಟಿಗೆಯಲ್ಲಿ ಹಾವುಗಳು ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಗ್ರಾಮಸ್ಥರು ಹಾವುಗಳನ್ನು ಸ್ಥಳದಿಂದ ಓಡಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಹಾವುಗಳು ಮಾತ್ರ ಸ್ಥಳದಿಂದ ಹೋಗಿರಲಿಲ್ಲ.ಕೊನೆಗೆ ಗ್ರಾಮಸ್ಥರು ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಉರಗ ತಜ್ಞರು ಎರಡು ಹಾವುಗಳನ್ನು ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹಾವುಗಳು ಸಂತಾನೋತ್ಪತ್ತಿ ಕ್ರಿಯೆಯಲ್ಲಿ ತೊಡಗಿದ್ದರಿಂದ ಹಾವುಗಳು ಒಂದೇ ಸ್ಥಳದಲ್ಲಿದ್ದವು ಅಂತಾ ಉರಗ ತಜ್ಞರು ಹೇಳಿದ್ದಾರೆ.Sign in to your account
Username or Email Address


Password

 Remember Me


