ಮೈಸೂರು: ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ನಗರದ ಜಯದೇವ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಗೆ ನಮ್ಮ ಸರ್ಕಾರದಿಂದ 5 ಸಾವಿರ ಕೋಟಿ ರೂ. ಹಣ  ನೀಡಿದ್ದೇವೆ. ಸ್ವಾತಂತ್ರ್ಯ ಭಾರತದಲ್ಲಿ ಇಷ್ಟು ಹಣ ಕೊಟ್ಟ ಸರ್ಕಾರ ಇಲ್ಲವೇ ಇಲ್ಲ. ಮೈಸೂರಿನ ಪರಂಪರೆ ಉಳಿಸಿಕೊಂಡು ಕಟ್ಟಡಗಳನ್ನ ನಿರ್ಮಿಸಿದ್ದೇವೆ ಎಂದರು.ಮೈಸೂರಿನ ಲಲಿತಮಹಾಲ್ ಪ್ಯಾಲೇಸ್ ಮಾದರಿಯಲ್ಲೇ ಜಿಲ್ಲಾಧಿಕಾರಿ ಕಚೇರಿ ಕಟ್ಟಿದ್ದೇವೆ. ಇಡೀ ದೇಶದಲ್ಲೇ ಅತ್ಯಂತ ಬೃಹತ್ ಹೃದ್ರೋಗ ಆಸ್ಪತ್ರೆ ನಿರ್ಮಿಸಿದ್ದೇವೆ. ಈ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರದಲ್ಲಿ ಮಾಡಿದ್ದೇವೆ. ಆದರೆ ಬೇರೆಯವರಂತೆ ಬರುತ್ತೇವೆ, ಮಾಡುತ್ತೇವೆ ಎಂದು ಹೇಳುತ್ತಿಲ್ಲ ಎಂದು ತಮ್ಮ ಸರ್ಕಾರದ ಸಾಧನೆಯನ್ನ ವೈಭವಿಕರಿಸಿ ಭಾಷಣ ಮಾಡಿದರು. Sign in to your account
Username or Email Address


Password

 Remember Me


