ಬೆಂಗಳೂರು: ಇಂದು ಶಾಸಕರ ಭವನದಲ್ಲಿ ಕುರುಬ ಸಮುದಾಯದ ಬಹು ವರ್ಷಗಳ ಕನಸನ್ನು ಸಿಎಂ ಸಿದ್ದರಾಮಯ್ಯ ನನಸು ಮಾಡಲಿದ್ದಾರೆ.ವಿಧಾನಸೌಧ ಆವರಣದಲ್ಲಿ ಕನಕದಾಸ ಪ್ರತಿಮೆ ಸ್ಥಾಪಿಸಬೇಕು ಎಂಬ ಬೇಡಿಕೆ ಮೊದಲಿನಿಂದಲು ಇತ್ತು. ಕುರುಬ ಸಮುದಾಯದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಪ್ರತಿಮೆ ಸ್ಥಾಪಿಸಬೇಕು ಎಂಬ ಒತ್ತಡ ಹೆಚ್ಚಿತ್ತು. ಆದ್ರೆ ವಿಧಾನಸೌಧ ಆವರಣದಲ್ಲಿ ಕನಕದಾಸ ಪ್ರತಿಮೆ ಸ್ಥಾಪನೆಗೆ ಅವಕಾಶ ಸಿಕ್ಕಿರಲಿಲ್ಲ.ವಿಧಾನಸೌಧ ಆವರಣದಲ್ಲಿ ಪ್ರತಿಮೆ ಸ್ಥಾಪನೆಗೆ ಅವಕಾಶ ಆಗದ ಹಿನ್ನೆಲೆ, ಶಾಸಕರ ಭವನದ ಆವರಣದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಇಂದು ಸಂಜೆ 5 ಗಂಟೆಗೆ ಶಾಸಕರ ಭವನದ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣ ವಾಗಿರುವ ಪ್ರತಿಮೆ ಲೋಕಾರ್ಪಣೆ ಆಗಲಿದೆ. ಈ ಮೂಲಕ ತಮ್ಮ ಸಮುದಾಯದ ಬಹು ವರ್ಷಗಳ ಕನಸು ನನಸು ಮಾಡುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.Sign in to your account
Username or Email Address


Password

 Remember Me


