ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಎಸಿಬಿ ರಾಜ್ಯಾದ ಹಲೆವಡೆ ದಾಳಿ ನಡೆಸಿದೆ. ಮಂಗಳೂರು, ಕೊಪ್ಪಳ, ತುಮಕೂರು, ಬೆಳಗಾವಿ, ಗಂಗಾವತಿ, ಕೋಲಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಕ್ರಮ ಆಸ್ತಿ ಗಳಿಗೆ ಹಿನ್ನಲೆಯಲ್ಲಿ ಮಂಗಳೂರಿನ ಕುಂಟಿಕಾನದಲ್ಲಿರುವ ಅಬಕಾರಿ ಡಿವೈಎಸ್‍ಪಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕ್ಷಕಿ ಶೃತಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.ಚಿಕ್ಕಮಗಳೂರಿನ ಆರ್.ಟಿ.ಓ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ವಿರುಪಾಕ್ಷ ಕೆ.ಸಿ ಅವರ ಜಯನಗರದಲ್ಲಿರುವ ಮನೆ ಮೇಲೆ ಹಾಗೂ ಆರ್‍ಟಿಓ ಕಚೇರಿ ಮೇಲೆ ದಾಳಿ ನಡೆದಿದೆ. ಹಾಸನ ಎಸಿಬಿ ಡಿವೈಎಸ್ಪಿ ಚಂದ್ರಪ್ಪ, ಮಂಡ್ಯ ಎಸಿಬಿ ಡಿವೈಎಸ್ಪಿ ಶೈಲೇಂದ್ರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಸತತ ಮೂರು ಗಂಟೆಗಳಿಂದ ದಾಖಲೆ ಪರಿಶೀಲನೆ ನಡೆಸುತ್ತಿರೋ ಎಸಿಬಿ ಅಧಿಕಾರಿಗಳು, ಆರ್‍ಟಿಓ ಕಚೇರಿ ಕೂಡ ಪರಿಶೀಲನೆ ನಡೆಸಿದ್ದಾರೆ.ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಿಲ್ಲಾ ಪಂಚಾಯತ್ ನ ಉಪ ವಿಭಾಗೀಯ ಕಚೇರಿ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾವತಿಯ ಜಯನರದಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಯ ಸುಮಾರು 20 ಕ್ಕೂ ಹೆಚ್ಚು ಅಧಿಕಾರಿಗಳು ಈ ದಾಳಿಯಲ್ಲಿ ಪಾಲ್ಗೊಂಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.ಎಸಿಬಿ ಅಧಿಕಾರಿಳು ಏಕಕಾಲಕ್ಕೆ ವಿಜಯಕುಮಾರ್ ಅವರಿಗೆ ಸೇರಿದ ಮನೆ ಹಾಗೂ ಖಾಸಗಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಜಯಕುಮಾರ್ ಈ ಹಿಂದೆ ಕನಕಗಿರಿ ಮೀಸಲು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಮುಂದಾಗಿದ್ದರು. ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎನ್ನುವ ಆರೋಪಗಳು ವಿಜಯಕುಮಾರ್ ಮೇಲೆ ಇದ್ದ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಬೆಳಗಾವಿ ಜಿಲ್ಲೆಯ ಅಥಣಿಯ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ರಾಜಶ್ರೀ ಜೈನಾಪುರ ಅವರ ವಿಜಯಪುರದ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಥಣಿ ರಸ್ತೆಯಲ್ಲಿನ ಲಕ್ಷ್ಮಿ ನರಸಿಂಹ ನಗರದಲ್ಲಿರುವ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದ್ದು, 6 ಅಧಿಕಾರಿಗಳ ತಂಡ ಭೇಟಿ ಮಾಡಿ ವಿಚಾರಣೆ ನಡೆಸಿದ್ದಾರೆ. ಈ ಮನೆಯನ್ನು ಜೈನಾಪುರ ಬಾಡಿಗೆಗೆ ನೀಡಿದ್ದು, ಬಾಡಿಗೆದಾರರನ್ನೇ ಎಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.ಕೋಲಾರ ಜಿಲ್ಲೆ ಮುಳಬಾಗಿಲು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಎಂಜಿನಿಯರ್ ಮನೆ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಶಾಕ್ ನೀಡಿದ್ದಾರೆ.Sign in to your account
Username or Email Address


Password

 Remember Me


