ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ತಗುಲಿ 6 ಏಕರೆ ದಾಳಿಂಬೆ ತೋಟ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತ್ಯಾಗದಕಟ್ಟೆ ಗ್ರಾಮದಲ್ಲಿ ನಡೆದಿದೆ.ಸುದೀಶ್ ಎಂಬುವರಿಗೆ ಸೇರಿದ ತೋಟದಲ್ಲಿ ಬೆಂಕಿ ಅವಘಡ ನಡೆದಿದೆ. ಆರು ಏಕರೆ ತೋಟದ ಜೊತೆ ಮನೆ ಸಹ ಬೆಂಕಿಗಾಹುತಿಯಾಗಿದೆ. ಒಟ್ಟು ಒಂಭತ್ತು ಏಕರೆ ತೋಟದಲ್ಲಿ ಆರು ಏಕರೆ ಬೆಂಕೆಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


