ಮೈಸೂರು: ಕೆರೆಗೆ ಈಜಲು ಹೋದ ಹತ್ತನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರಂತ ಘಟನೆ ಹುಣಸೂರು ತಾಲ್ಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ.ಮಂಗಳವಾರ ಮಧ್ಯಾಹ್ನ ಹೈರೆಗೆ ಗ್ರಾಮದ ಕೆರೆಯಲ್ಲಿ ಈಜಾಡಲು ಹೋಗಿದ್ದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದರು. ಘಟನೆ ನಡೆದ ಬಳಿಕ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಇಬ್ಬರು ಮಕ್ಕಳ ಮೃತದೇಹವನ್ನು ಮೇಲಕ್ಕೆ ಎತ್ತಿದ್ದರು. ರಾತ್ರಿಯಾದ ಕಾರಣ ಕಾರ್ಯಚರಣೆಯನ್ನ ಸ್ಥಗಿತಗೊಳಿಸಿ ಇಂದು ಬೆಳಗ್ಗೆ ಮತ್ತೆ ಕಾರ್ಯಚರಣೆ ಆರಂಭ ಮಾಡಿ ಮತ್ತಿಬ್ಬರ ಮೃತದೇಹಗಳನ್ನು ಪತ್ತೆ ಮಾಡಿದ್ದಾರೆ.ನಾಪತ್ತೆಯಾಗಿದ್ದ ನಾಲ್ವರೂ ಸಹಪಾಠಿಗಳಾಗಿದ್ದು, ಹುಣಸೂರಿನ ಸೆಂಟ್ ಜೋಸೆಫ್ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಹುಣಸೂರಿನ ನಿವಾಸಿಗಳಾದ ಅನಿಲ್, ಭರತ್, ಧನಂಜಯ್, ಯಶವಂತ್ ಮೃತ ವಿದ್ಯಾರ್ಥಿಗಳು.ಕಾರ್ಯಾಚರಣೆ ನಡೆಸಿದ ಕೆರೆಯ ದಡದಲ್ಲಿ ಚಪ್ಪಲಿ, ವಾಚ್, ಬೈಕ್ ಪತ್ತೆಯಾಗಿದ್ದು, ಮಕ್ಕಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


