ರಾಮನಗರ: ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕೊಂದು ಚಿನ್ನಾಭರಣ ದೋಚಿದ್ದ ಆರೋಪಿಯನ್ನ ಚನ್ನಪಟ್ಟಣ ತಾಲೂಕಿನ ಎಂಕೆ ದೊಡ್ಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೇವೂರು ಮಂಡ್ಯ ಗ್ರಾಮದ ನಾಗೇಶ್ ಬಂಧಿತ ಆರೋಪಿ. ಇದೇ ತಿಂಗಳ 15 ರಂದು ಬೇವೂರು ಮಂಡ್ಯ ನಿವಾಸಿ ಸರೋಜಮ್ಮ ಎಂಬಾಕೆಯ ಕತ್ತು ಕೂಯ್ದು ಕೊಲೆ ಮಾಡಲಾಗಿತ್ತು. ಎರಡನೇ ಮದುವೆಯ ಖರ್ಚಿಗಾಗಿ ಆರೋಪಿ ನಾಗೇಶ್ ಸರೋಜಮ್ಮಳನ್ನು ಕೊಂದು ಚಿನ್ನಾಭರಣ ದೋಚಿದ್ದ.ಘಟನೆ ಸಂಬಂಧ ಎಂಕೆ ದೊಡ್ಡಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 80 ಗ್ರಾಂ ಚಿನ್ನಾಭರಣ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


