ಬೆಂಗಳೂರು: ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಗಣ್ಯ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಅನುಸರಿಸಿಕೊಂಡು ಬಂದಿರುವ ಸರ್ಕಾರ ಇದೀಗ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟ ಮಾಡಿದೆ.ಈ ಬಾರಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. 50ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ‘ಕರ್ನಾಟಕ ಸಂಭ್ರಮ 50 ವರ್ಷ’ ಎಂಬ ಹೆಸರಿನಲ್ಲಿ 10 ಪ್ರಶಸ್ತಿಯನ್ನೂ ನೀಡಲಿದೆ.ಈ ಪೈಕಿ 100 ವರ್ಷ ದಾಟಿದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. 13 ಮಹಿಳೆಯರು, 54 ಪುರುಷರು ಹಾಗೂ ಒಬ್ಬರು ಮಂಗಳಮುಖಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಪ್ರಶಸ್ತಿ ಪಡೆದವರಿಗೆ 5 ಲಕ್ಷ ರೂ. ನಗದು ಹಾಗೂ 25 ಗ್ರಾಂ ಚಿನ್ನದ ಪದಕ ನೀಡಲಾಗುತ್ತದೆ.ಪ್ರಶಸ್ತಿ ಪಟ್ಟಿ: 
ಸಂಗೀತ/ನೃತ್ಯ ಕ್ಷೇತ್ರ: ಡಾ. ನಯನ ಎಸ್ ಮೋರೆ, ನೀಲಾ ಎಂ ಕೊಡ್ಲಿ, ಶಬ್ಬೀರ್ ಅಹಮದ್, ಡಾ. ಎಸ್ ಬಾಳೇಶ ಭಜ್ರಂತಿ ಅವರಿಗೆ ಪ್ರಶಸ್ತಿ ಲಭಿಸಿದೆ.ಚಲನಚಿತ್ರ ಕ್ಷೇತ್ರ: ಡಿಂಗ್ರಿ ನಾಗರಾಜ, ಬಿ. ಜನಾರ್ದನ (ಬ್ಯಾಂಕ್ ಜನಾರ್ದನ).ರಂಗಭೂಮಿ ಕ್ಷೇತ್ರ: ಎಜಿ ಚಿದಂಬರ ರಾವ್ ಜಂಬೆ, ಪಿ ಗಂಗಾಧರ ಸ್ವಾಮಿ, ಹೆಚ್‌ಬಿ ಸರೋಜಮ್ಮ, ತಯ್ಯಬಖಾನ್ ಎಂ ಇನಾಮದಾರ, ವಿಶ್ವನಾಥ್ ವಂಶಾಕೃತ ಮಠ, ಪಿ ತಿಪ್ಪೇಸ್ವಾಮಿ.ಶಿಲ್ಪಕಲೆ/ ಚಿತ್ರಕಲೆ/ ಕರಕುಶಲ ಕ್ಷೇತ್ರ: ಟಿ ಶಿವಶಂಕರ್, ಕಾಳಪ್ಪ ವಿಶ್ವಕರ್ಮ, ಮಾರ್ಥಾ ಜಾಕಿಮೋವಿಚ್ ಮತ್ತು ಪಿ ಗೌರಯ್ಯ.ಯಕ್ಷಗಾನ/ಬಯಲಾಟ ಕ್ಷೇತ್ರ: ಅರ್ಗೋಡು ಮೋಹನದಾಸ್ ಶೆಣೈ, ಕೆ ಲೀಲಾವತಿ ಬೈಪಾಡಿತ್ತಾಯ, ಕೇಶಪ್ಪ ಶಿಳ್ಳಿಕ್ಯಾತರ, ದಳವಾಯಿ ಸಿದ್ದಪ್ಪ (ಹಂದಿಜೋಗಿ).ಜಾನಪದ ಕ್ಷೇತ್ರ: ಹುಸೇನಬಿ ಬುಡೆನ್ ಸಾಬ್ ಸಿದ್ದಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪಾ, ಶಕುಂತಲಾ ದೇವಲಾನಾಯಕ, ಹೆಚ್‌ಕೆ ಕಾರಮಂಚಪ್ಪ, ಶಂಭು ಬಳಿಗಾರ, ವಿಭೂತಿ ಗುಂಡಪ್ಪ, ಚೌಡಮ್ಮ.ಸಮಾಜಸೇವೆ ಕ್ಷೇತ್ರ: ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ರೂಪಾ ನಾಯಕ್, ನಿಜಗುಣಾನಂದ ಮಹಾಸ್ವಾಮಿಗಳು, ನಾಗರಾಜು ಜಿ.ಆಡಳಿತ ಕ್ಷೇತ್ರ: ಜಿವಿ ಬಲರಾಮ್ವೈದ್ಯಕೀಯ ಕ್ಷೇತ್ರ: ಡಾ. ಸಿ ರಾಮಚಂದ್ರ, ಡಾ. ಪ್ರಶಾಂತ್ ಶೆಟ್ಟಿ.ಸಾಹಿತ್ಯ ಕ್ಷೇತ್ರ: ಪ್ರೊ. ಸಿ ನಾಗಣ್ಣ, ಸುಬ್ಬು ಹೊಲೆಯಾರ್ (ಹೆಚ್‌ಕೆ ಸುಬ್ಬಯ್ಯ), ಸತೀಶ್ ಕುಲಕರ್ಣಿ, ಲಕ್ಷ್ಮಿಪತಿ ಕೋಲಾರ, ಪರಪ್ಪ ಗುರುಪಾದಪ್ಪ ಸಿದ್ದಾಪುರ, ಡಾ. ಕೆ ಷರೀಫಾ.ಶಿಕ್ಷಣ ಕ್ಷೇತ್ರ: ರಾಮಪ್ಪ (ರಾಮಣ್ಣ) ಹವಳೆ, ಕೆ ಚಂದ್ರಶೇಖರ್, ಕೆಟಿ ಚಂದು.ಕ್ರೀಡಾ ಕ್ಷೇತ್ರ: ದಿವ್ಯ ಟಿಎಸ್, ಅದಿತಿ ಅಶೋಕ್, ಅಶೋಕ್ ಗದಿಗೆಪ್ಪ ಏಣಗಿ.ನ್ಯಾಯಾಂಗ ಕ್ಷೇತ್ರ: ವಿ ಗೋಪಾಲಗೌಡ.ಕೃಷಿ-ಪರಿಸರ ಕ್ಷೇತ್ರ: ಸೋಮನಾಥರೆಡ್ಡಿ ಪೂರ್ಮಾ, ದ್ಯಾವನಗೌಡ ಟಿ. ಪಾಟೀಲ, ಶಿವರೆಡ್ಡಿ ಹನುಮರೆಡ್ಡಿ ವಾಸನ.ಸಂಕೀರ್ಣ ಕ್ಷೇತ್ರ: ಎಎಂ ಮದರಿ, ಹಾಜಿ ಅಬ್ದುಲ್ಲಾ ಪರ್ಕಳ, ಮಿಮಿಕ್ರಿ ದಯಾನಂದ್, ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್, ಕೊಡನ ಪೂವಯ್ಯ ಕಾರ್ಯಪ್ಪ.ಮಾಧ್ಯಮ ಕ್ಷೇತ್ರ: ದಿನೇಶ ಅಮೀನ್‌ಮಟ್ಟು, ಜವರಪ್ಪ, ಮಾಯಾ ಶರ್ಮ, ರಫೀ ಭಂಡಾರ.ವಿಜ್ಞಾನ/ ತಂತ್ರಜ್ಞಾನ ಕ್ಷೇತ್ರ: ಎಸ್. ಸೋಮನಾಥ್ ಶ್ರೀಧರ್ ಪನಿಕರ್, ಪ್ರೊ. ಗೋಪಾಲನ್ ಜಗದೀಶ್ಹೊರನಾಡು/ ಹೊರದೇಶ ಕ್ಷೇತ್ರ: ಸೀತಾರಾಮ ಅಯ್ಯಂಗಾರ್, ದೀಪಕ್ ಶೆಟ್ಟಿ, ಶಶಿಕಿರಣ್ ಶೆಟ್ಟಿ.ಸ್ವಾತಂತ್ರ್ಯ ಹೋರಾಟಗಾರ ಕ್ಷೇತ್ರ: ಪುಟ್ಟಸ್ವಾಮಿ ಗೌಡ.10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ: 
1. ಕರ್ನಾಟಕ ಸಂಘ
2. ಬಿಎನ್ ಶ್ರೀರಾಮ ಪುಸ್ತಕ ಪ್ರಕಾಶನ
3. ಮಿಥಿಕ್ ಸೊಸೈಟಿ
4. ಕನಾಟಕ ಸಾಹಿತ್ಯ ಸಂಘ
5. ಮೌಲಾನಾ ಅಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ(ರಿ)
6. ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ
7. ಸ್ನೇಹರಂಗ ಹವ್ಯಾಸಿ ಕಲಾ ಸಂಸ್ಥೆ
8. ಚಿಣ್ಣರ ಬಿಂಬ
9. ಮಾರುತಿ ಜನಸೇವಾ ಸಂಘ
10. ವಿದ್ಯಾದಾನ ಸಮಿತಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


