ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿಯಿಂದಲೇ ಆರಂಭಿಕ ಪ್ರವಾಸ ಹಮ್ಮಿಕೊಂಡಿದ್ದಾರೆ.ಇಂದು ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಮಂಗಳವಾರ ಕುಕ್ಕೆಯಲ್ಲಿ ಬೆಳಗ್ಗೆ 7 ಗಂಟೆಗೆ ಅಮಿತ್ ಶಾ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಅಮಿತ್ ಶಾ ಇಳಿಯಲಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಸುಬ್ರಹ್ಮಣ್ಯದ ಕುಲ್ಕುಂದದಲ್ಲಿ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಮಾತನಾಡಲಿದ್ದಾರೆ. ಬಳಿಕ ಇತ್ತೀಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸುರತ್ಕಲ್‍ನ ಕಾಟಿಪಳ್ಳದ ದೀಪಕ್ ರಾವ್ ಮನೆಗೆ ಭೇಟಿ ನೀಡಲಿದ್ದಾರೆ.ಮೈಸೂರಿನಲ್ಲಿ ಮೋದಿ: ಇತ್ತ ಪ್ರಧಾನಿ ನರೇಂದ್ರ ಮೋದಿಯವರು ಹಮ್ ಸಫರ್ ರೈಲು ಮತ್ತು ಹಲವು ಯೋಜನೆಗಳಿಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿದ್ದಾರೆ. ಭಾನುವಾರ ತಡರಾತ್ರಿ 11 ಗಂಟೆಗೆ ಮೋದಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಶಿಷ್ಠಾಚಾರದ ಅನ್ವಯ ಸ್ವಾಗತ ಕೋರಿದ್ರು. ರಾಜ್ಯಪಾಲ ವಜುಭಾಯಿ ವಾಲಾ ಕೂಡ ಮೋದಿಗೆ ಸ್ವಾಗತ ಕೋರಿದ್ರು. ಬಳಿಕ ಮೋದಿ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ರು.ಮೋದಿ ಆಗಮನಕ್ಕೆ ಕಾಯುತ್ತಿದ್ದ ನೂರಾರು ಅಭಿಮಾನಿಗಳು ಮೋದಿ ಆಗಮಿಸ್ತಿದ್ದಂತೆ ಜಯಘೋಷ ಕೂಗಿದರು. ಮೋದಿ ವಿಮಾನ ನಿಲ್ದಾಣದಿಂದ ನಿರ್ಗಮಿಸ್ತಿದ್ದಂತೆ ಸಿಎಂ ಕೂಡ ತೆರಳಲು ವಿಮಾನ ನಿಲ್ದಾಣದಿಂದ ಹೊರ ಬಂದರು. ಆಗಲೂ ಎಲ್ಲರು ಮೋದಿ ಮೋದಿ ಎಂದು ಘೋಷಣೆ ಕೂಗಿದರು.Sign in to your account
Username or Email Address


Password

 Remember Me


