ಉಡುಪಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಕೊಟ್ಟಲ್ಲೆಲ್ಲಾ ಬಿಜೆಪಿಗೆ ಲಾಭ ಅಂತ ಹೇಳುತ್ತಾರೆ. ಹಾಗಾದ್ರೆ ರಾಹುಲ್ ಪ್ರವಾಸ ಮಾಡಿದ್ರೆ ಬಿಜೆಪಿಗೆ ಟೆನ್ಶನ್ ಯಾಕೆ ಅಂತ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಪ್ರಶ್ನಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಪ್ರವಾಸದ ವೇಳೆ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಸರ್ಕಾರದ ಕೆಲಸ ಜನರ ಮನಸ್ಸು, ಹೃದಯ, ಕರುಳನ್ನು ತಲುಪಿದೆ. ರಾಹುಲ್ ರಾಜ್ಯಕ್ಕೆ ಬಂದ್ರೆ ಬಿಜೆಪಿಗೆ ಲಾಭ ಆಗೋದಾದ್ರೆ ಪ್ರಧಾನಿ ಮೋದಿ, ಅಮಿತ್ ಶಾ ಬಂದ್ರೆ ಕಾಂಗ್ರೆಸ್ಸಿಗೆ ಲಾಭವಾಗುತ್ತಾ? ಅಂತ ಆಸ್ಕರ್ ಪ್ರಶ್ನೆ ಮಾಡಿದರು.ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೀನುಗಾರರ ಸಮಾವೇಶ ಮಾಡುತ್ತಾರೆ. ಕರಾವಳಿ ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಸಮಾವೇಶ ಮಾಡುವ ಜೊತೆ ಮೀನುಗಾರರಿಗೆ ಎಲ್ಲಾ ವಿಚಾರದಲ್ಲೂ ಸಂಪೂರ್ಣ ಸಹಕಾರ ಕೊಡಿ ಎಂದು ಹೇಳಿದರು.ರಾಹುಲ್ ಗಾಂಧಿ ದೇವಸ್ಥಾನ ಭೇಟಿ ವಿಚಾರದಲ್ಲಿ ವಿಪಕ್ಷಗಳು ಟೀಕಿಸುತ್ತವೆ. ಟೀಕೆ ಮಾಡುವುದು ಅವರ ಕೆಲಸ ಎಂದು ಹೇಳಿದರು.Sign in to your account
Username or Email Address


Password

 Remember Me


