ತುಮಕೂರು: ಶಾಲಾ ವಾಹನ ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕರು ಹಾಗೂ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಹುಸೇನ್ ಪುರ ಗ್ರಾಮದ ಬಳಿ ನಡೆದಿದೆ.ಸತ್ಯಸಾಯಿ ಜಗದಾಂಬಾ ಖಾಸಗಿ ಶಾಲೆಯ ವಾಹನ ಇದಾಗಿದ್ದು, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಶಾಲಾವಾಹನದ ಅಪಘಾತ ಸಂಭವಿಸುತ್ತಿದ್ದಂತೆ ಅಲ್ಲೇ ಇದ್ದ ಸ್ಥಳೀಯರು ವಾಹನದಲ್ಲಿನ ವಿದ್ಯಾರ್ಥಿಗಳನ್ನು ರಕ್ಷಿಸಿ ತಿರುಮಣಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಚಾಲಕ ಜಯರಾಮ್ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದೆ ವಾಹನ ಪಲ್ಟಿ ಹೊಡೆಯಲು ಕಾರಣ ಎನ್ನಲಾಗಿದೆ. ಅಪಘಾತ ಸಂಭವಿಸಿದ ನಂತರ ಚಾಲಕ ಜಯರಾಮ್ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


