ಹುಬ್ಬಳ್ಳಿ: ನಮ್ಮ ದೇಶ ಹಾಗೂ ಸಂಸ್ಕೃತಿಗೆ ವಿರುದ್ಧವಾಗಿರುವ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲು ಬಿಡುವುದಿಲ್ಲ ಎಂದು ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ವಿಠ್ಠಲ ಪವಾರ ಎಚ್ವರಿಕೆ ನೀಡಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪ್ರೇಮಿಗಳ ದಿನದ ನೆಪದಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರೇಮಿಗಳ ದಿನಾಚರಣೆ ಭಾರತೀಯ ಸಂಸ್ಕೃತಿ ವಿರೋಧಿಯಾಗಿದೆ ಎಂದು ಹೇಳಿದರು.ನಮ್ಮ ಯುವ ಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಯ ಮಾರು ಹೋಗಬಾರದು ಎಂದ ಅವರು ಪ್ರೇಮಿ ದಿನಾಚರಣೆ ನೆಪದಲ್ಲಿ ಪಾರ್ಕ್, ರೆಸಾರ್ಟ್, ಹೋಟೆಲ್ ಹಾಗೂ ಲಾಡ್ಜ್ ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿದೆ. ಅಂತವುಗಳು ಕಂಡು ಬಂದರೆ ದಾಳಿ ಮಾಡಲಾಗುವುದು ಎಂದು ಎಚ್ಚರಿಕೆಯನ್ನ ನೀಡಿದರು.ಪೊಲೀಸ್ ಇಲಾಖೆ ಇಂತಹಗಳಿಗೆ ಅವಕಾಶ ನೀಡಬಾರದು ಎಂದು ವಿಠಲ್ ಮನವಿ ಮಾಡಿಕೊಂಡಿದ್ದಾರೆ. ಒಂದು ವೇಳೆ ಸಾರ್ವಜನಿಕ ಸ್ಥಳದಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸುವುದು ಕಂಡು ಬಂದರೆ ಅವರ ಪೋಷಕರಿಗೆ ಮಾಹಿತಿ ನೀಡಿ ಮದುವೆ ಮಾಡಿಸುವುದಾಗಿ ಎಚ್ಚರಿಕೆ ನೀಡಿದರು. Sign in to your account
Username or Email Address


Password

 Remember Me


