ಕೋಲಾರ: ಇಟ್ಟಿಗೆ ಕಾರ್ಖಾನೆಯ ಯಂತ್ರಕ್ಕೆ ಕೈ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಕೈ ಕಳೆದುಕೊಂಡ ಆಘಾತಕಾರಿ ಘಟನೆಯೊಂದು ಕೋಲಾರದಲ್ಲಿ ನಡೆದಿದೆ.ಜಿಲ್ಲೆಯ ಮಾಲೂರು ತಾಲೂಕಿನ ದ್ಯಾಪಸಂದ್ರ ಗ್ರಾಮದ ರಾಜಾರಾಮ್ ಇಟ್ಟಿಗೆ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, 30 ವರ್ಷದ ಅಕ್ಬರ್ ಅಲಿ ಕೈಕಳೆದುಕೊಂಡ ಕೂಲಿ ಕಾರ್ಮಿಕರಾಗಿದ್ದಾರೆ.ಇಟ್ಟಿಗೆ ಕೊಯ್ಯುವಾಗ ಅಚಾನಕ್ಕಾಗಿ ಕಾರ್ಮಿಕ ಅಕ್ಬರ್ ಅಲಿಯ ಬಲಗೈ ಯಂತ್ರದಲ್ಲಿ ಸಿಲುಕಿದ್ದು, ಪರಿಣಾಮ ಅಂಗೈ ಸಂಪೂರ್ಣ ನಜ್ಜು ಗುಜ್ಜಾಗಿದೆ. ಕೂಡಲೇ ಗಾಯಾಳುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


