ಬೀದರ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸ ಇಂದು ಅಂತ್ಯವಾಗಲಿದೆ. ಇಂದು ರಾಹುಲ್ ಗಾಂಧಿ ಕಲಬುರ್ಗಿಯಲ್ಲಿ ದಿವಂಗತರಾದ ಇಬ್ಬರು ಕಾಂಗ್ರೆಸ್ ನಾಯಕರುಗಳ ಮನೆಗಳಿಗೆ ಭೇಟಿ ಕೊಡಲಿದ್ದಾರೆ. ಇದನ್ನೂ ಓದಿ:  ರಾಹುಲ್ ಪ್ರಧಾನಿ ಆಗೋವರೆಗೆ ಚಪ್ಪಲಿಯೇ ಹಾಕಲ್ಲ – ಅಭಿಮಾನಿಯಿಂದ ಶಪಥಮಾಜಿ ಸಿಎಂ ಎನ್ ಧರ್ಮಸಿಂಗ್ ಹಾಗೂ ಮಾಜಿ ಸಚಿವ ಖಮರುಲ್ ಇಸ್ಲಾಮ್ ರವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ಕೊಡಲಿರುವ ರಾಹುಲ್ ಗಾಂಧಿ ಉಭಯ ನಾಯಕರ ಕುಟುಂಬ ಸದಸ್ಯರುಗಳಿಗೆ ಸಾಂತ್ವಾನ ಹೇಳಲಿದ್ದಾರೆ. ಬಳಿಕ ಕಲಬುರ್ಗಿಯ ವಾಣಿಜ್ಯೋದ್ಯಮಿಗಳ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ಆ ಬಳಿಕ ಮಧ್ಯಾಹ್ನಕ್ಕೆ ರಾಹುಲ್ ಹೆಲಿಕಾಪ್ಟರ್ ಮೂಲಕ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ತೆರಳಲಿದ್ದಾರೆ. ಇದನ್ನೂ ಓದಿ: ಭಾಷಣದಲ್ಲಿ ಮಹದಾಯಿ ಬಗ್ಗೆ ಒಂದೇ ಒಂದು ಮಾತು ಎತ್ತಲಿಲ್ಲ- ರಾಹುಲ್ ವಿರುದ್ಧ ಶೆಟ್ಟರ್ ವಾಗ್ದಾಳಿಬಸವಕಲ್ಯಾಣದಲ್ಲಿ ರಾಹುಲ್ ಗಾಂಧಿ ಅನುಭವ ಮಂಟಪಕ್ಕೆ ಭೇಟಿ ಕೊಡಲಿದ್ದಾರೆ. ಇಡೀ ದಿನ ಕಾಂಗ್ರೆಸ್ ನ ರಾಜ್ಯ ನಾಯಕರುಗಳು ರಾಹುಲ್ ಗಾಂಧಿಗೆ ಸಾಥ್ ನೀಡಲಿದ್ದಾರೆ. ಮದ್ಯಾಹ್ನ 1 ಗಂಟೆ ನಂತರ ರಾಹುಲ್ ಗಾಂಧಿ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ:  ಒಂದೇ ದಿನದಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಪ್ರವಾಸSign in to your account
Username or Email Address


Password

 Remember Me


